ಮಲೇಬೆನ್ನೂರು, ಅ.24- ವಿಜಯ ದಶಮಿ ಹಬ್ಬದ ಅಂಗವಾಗಿ ಕೊಮಾರನಹಳ್ಳಿಯಲ್ಲಿ ಮಂಗಳವಾರ ಹೆಳವನಕಟ್ಟೆ ಶ್ರೀ ಲಕ್ಷ್ಮೀ ರಂಗನಾಥ ಸ್ವಾಮಿಯ ಬ್ರಹ್ಮ ರಥೋತ್ಸವವು ಸಂಭ್ರಮದಿಂದ ಜರುಗಿತು. ರಥದಲ್ಲಿ ಶ್ರೀ ರಂಗನಾಥ ಸ್ವಾಮಿಯ ಉತ್ಸವ ಮೂರ್ತಿಯನ್ನು ಪ್ರತಿಷ್ಠಾಪಿಸಿದ ನಂತರ ರಥಕ್ಕೆ ಪೂಜೆ ಸಲ್ಲಿಸಿ, `ಗೋವಿಂದಾ ಗೋವಿಂದಾ’ ಎಂಬ ಜಯಘೋಷದೊಂದಿಗೆ ನೂರಾರು ಭಕ್ತರು ರಥ ಎಳೆದು ಸಂಭ್ರಮಿಸಿದರು. ಈ ವೇಳೆ ಭಕ್ತರು ರಥದ ಮೇಲೆ ಬಾಳೆಹಣ್ಣು ಎಸೆದು ಭಕ್ತಿ ಸಮರ್ಪಿಸಿದರು. ವಿವಿಧ ವಾದ್ಯ ಮೇಳಗಳು ರಥೋತ್ಸವಕ್ಕೆ ಮೆರಗು ತಂದವು. ವರ್ಷದಲ್ಲಿ ಎರಡು ಬಾರಿ ರಥೋತ್ಸವ ನಡೆಯುವುದು ಈ ಕೊಮಾರನಹಳ್ಳಿಯ ವಿಶೇಷವಾಗಿದೆ.
ಕೊಮಾರನಹಳ್ಳಿಯಲ್ಲಿ ಸಂಭ್ರಮದ ರಥೋತ್ಸವ
![11 komaranahalli ratha 25.10.2023 ಕೊಮಾರನಹಳ್ಳಿಯಲ್ಲಿ ಸಂಭ್ರಮದ ರಥೋತ್ಸವ](https://janathavani.com/wp-content/uploads/2023/10/11-komaranahalli-ratha-25.10.2023-860x645.jpg)