ದಾವಣಗೆರೆ, ಅ.25- ಕರ್ನಾಟಕ ವಿಶ್ವಕರ್ಮ ಸಮುದಾಯ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಡಿ ಸಹಾಯಧನ ಮತ್ತು ಸಾಲ ಸೌಲಭ್ಯ ಪಡೆಯಲು ಸೇವಾ ಸಿಂಧು ತಂತ್ರಾಂಶದ ಮುಖಾಂತರ ಆನ್ಲೈನ್ ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಇದೇ ದಿನಾಂಕ 31 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಯನ್ನು ನಿಗಮದ ವೆಬ್ಸೈಟ್ಅwww.kvcdcl.karnataka.gov.in ಅಥವಾ ಜಿಲ್ಲಾ ವ್ಯವಸ್ಥಾಪಕರು ಕರ್ನಾಟಕ ವಿಶ್ವಕರ್ಮ ಸಮುದಾಯ ಅಭಿವೃದ್ಧಿ ನಿಗಮ ನಿಯಮಿತ ದಾವಣಗೆರೆ ದೂ.ಸಂ 08192-230934 ಸಂಪರ್ಕಿಸಬಹುದು ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕ ಸಾತ್ವಿಕ್ ತಿಳಿಸಿದ್ದಾರೆ.
July 24, 2024