ದುಗ್ಗಮ್ಮಪೇಟೆ ಸರ್ಕಾರಿ ಶಾಲೆಯಲ್ಲಿ ಮಹರ್ಷಿ ವಾಲ್ಮೀಕಿ ಜಯಂತ್ಯೋತ್ಸವ

ದುಗ್ಗಮ್ಮಪೇಟೆ ಸರ್ಕಾರಿ ಶಾಲೆಯಲ್ಲಿ  ಮಹರ್ಷಿ ವಾಲ್ಮೀಕಿ ಜಯಂತ್ಯೋತ್ಸವ

ದಾವಣಗೆರೆ, ಅ. 30- ಸ್ಥಳೀಯ ಶಿವಾಜಿ ನಗರದ ಹಳೇಊರು ದುಗ್ಗಮ್ಮಪೇಟೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ  ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಿಸಲಾಯಿತು. 

ಕಾರ್ಯಕ್ರಮದಲ್ಲಿ ಶಾಲೆಯ ಅಧ್ಯಕ್ಷ ನಿಂಗರಾಜು ಹಾವನೂರು ಅವರು ಮಕ್ಕಳಿಗೆ ಮಹರ್ಷಿ ವಾಲ್ಮೀಕಿ ಅವರು ರಚಿಸಿದ ರಾಮಾಯಣದಲ್ಲಿ ಬರುವ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಲು ತಿಳಿಸಿದರು.

ಇದೇ ಸಂದರ್ಭದಲ್ಲಿ ಸರ್ಕಾರದಿಂದ ಕೊಡುವ ಸಮವಸ್ತ್ರಗಳನ್ನು ಮಕ್ಕಳಿಗೆ ವಿತರಿಸಲಾಯಿತು. ಮುಖ್ಯ ಶಿಕ್ಷಕರಾದ ಶ್ರೀಮತಿ ಕಲ್ಲಮ್ಮ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಶ್ರೀಮತಿ ಶಾರದಾ ಸ್ವಾಗತಿಸಿದರು. ಶ್ರೀಮತಿ ತಾಜ್ ವಂದಿಸಿದರು.

error: Content is protected !!