ಮಲ್ಲಿಗೇನಹಳ್ಳಿಯಲ್ಲಿ ಇಂದು ಆರೋಗ್ಯ ತಪಾಸಣೆ ಶಿಬಿರ

ಆರೈಕೆ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ, ಪ್ರೀತಿ ಆರೈಕೆ ಟ್ರಸ್ಟ್‌ ಇವರ ಸಹಯೋಗದಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರವು ಇಂದು ನ್ಯಾಮತಿ ತಾಲ್ಲೂಕಿನ ಮಲ್ಲಿಗೇನಹಳ್ಳಿಯ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ ಹತ್ತಿರ  ಬೆಳಿಗ್ಗೆ 9 ರಿಂದ ಮಧ್ಯಾಹ್ನ 2 ರವರೆಗೆ ನಡೆಯಲಿದೆ. ನೇತೃತ್ವವನ್ನು ಆರೈಕೆ ಆಸ್ಪತ್ರೆ ಮುಖ್ಯಸ್ಥ ಡಾ. ರವಿಕುಮಾರ್‌ ಟಿ.ಜಿ ವಹಿಸುವರು. ಶಿಬಿರವು ಗ್ರಾ.ಪಂ. ಮಾಜಿ ಉಪಾಧ್ಯಕ್ಷ ಎಲ್‌.ಎಂ. ರಂಗನಾಥ್‌  ಅವರ ಸಹಕಾರದೊಂದಿಗೆ ನಡೆಯುವುದು. ಸಂಪರ್ಕಿಸಿ : 91644 65550, 97317 82463, 84315 42487.

error: Content is protected !!