ಕಲ್ಯಾಣ ಕರ್ನಾಟಕ ಕಲಾವಿದರ ಒಕ್ಕೂಟದಿಂದ ಸಂಗೀತ ಸೌರಭ

ಕಲ್ಯಾಣ ಕರ್ನಾಟಕ ಕಲಾವಿದರ ಒಕ್ಕೂಟದಿಂದ ಸಂಗೀತ ಸೌರಭ

ಹರಪನಹಳ್ಳಿ, ನ. 2- ಹರಪನಹಳ್ಳಿ ಕಲ್ಯಾಣ ಕರ್ನಾಟಕ ಕಲಾವಿದರ ಒಕ್ಕೂಟದ ವತಿಯಿಂದ 68ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ  ಸಂಗೀತ ಸೌರಭ ಕಾರ್ಯಕ್ರಮ ಹಾಗೂ ಸನ್ಮಾನ ಸಮಾರಂಭವನ್ನು ಶಾಸಕರಾದ ಎಂ.ಪಿ. ಲತಾ ಮಲ್ಲಿಕಾರ್ಜುನ್ ಉದ್ಘಾಟಿಸಿದರು.

ನೀಲಗುಂದದ ಗುಡ್ಡದ ಸಂಸ್ಥಾನ ಜಂಗಮ ಪೀಠದ ಶ್ರೀ ಚನ್ನಬಸವ ಶಿವಯೋಗಿಗಳು ದಿವ್ಯ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು. ಕಲ್ಯಾಣ ಕರ್ನಾಟಕ ಕಲಾವಿದರ ಒಕ್ಕೂಟದ ಅಧ್ಯಕ್ಷ ನಿಚ್ಚವನಹಳ್ಳಿ ಭೀಮಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಇದೇ ವೇಳೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ  ಹಡಗಲಿಯ ವಲಯ ಅರಣ್ಯಾಧಿಕಾರಿ ರೇಣುಕಮ್ಮ,  ಕೀಲು, ಮೂಳೆ ನಾಟಿ ವೈದ್ಯ  ಡಾ. ಬಿ.ಬಿ.ಹೊಸೂರಪ್ಪ ಅವರನ್ನು ಸನ್ಮಾನಿಸಿ, ಗೌರವಿಸಿದರು.

ಉಪವಿಭಾಗಾಧಿಕಾರಿ ಟಿ.ವಿ. ಪ್ರಕಾಶ್, ಎಡಿಬಿ ಪ್ರಥಮ ದರ್ಜೆ ಮಹಾವಿದ್ಯಾಲ ಯದ ಕನ್ನಡ ಸಹ ಪ್ರಾಧ್ಯಾಪಕ ಡಾ. ಡಿ. ತಿಪ್ಪೇಸ್ವಾಮಿ, ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಕೆ. ಉಚ್ಚೆಂಗೆಪ್ಪ, ತಹಶಿಲ್ದಾರ್ ಗಿರೀಶ್ ಬಾಬು, ಇಒ ಪ್ರಕಾಶ, ಬಿಇಒ ಯು. ಬಸವರಾಜಪ್ಪ, ಪುರಸಭೆ ಮುಖ್ಯಾಧಿಕಾರಿ ಎರಗುಡಿ ಶಿವಕುಮಾರ್, ರಾಜ್ಯೋತ್ಸವ ಪ್ರಶಸ್ತಿ ವಿಜೇತ ಬಾಗಳಿ ಷಡಕ್ಷರಪ್ಪ,  ಮುಖಂಡರಾದ ಹೆಚ್.ಎನ್. ಪರಸನಾಯ್ಕ, ದೇವರ ತಿಮ್ಮಲಾಪುರದ ನಾಗರಾಜ ಬಣಕಾರ್, ಬೆಣ್ಣಿಹಳ್ಳಿಯ ನಿವೃತ್ತ ಶಿಕ್ಷಕ ಅಬ್ದುಲ್ ಸಲಾಂ, ನೂರುಲ್ಲಾ ಸಾಬ್,  ಮೋತಿ ಮಾರುತಿ, ಮುಸ್ತಾಪ್ ಸಾಬ್ ಸೇರಿದಂತೆ ಇತರರು ಇದ್ದರು.

error: Content is protected !!