ನಗರದಲ್ಲಿ ಇಂದು ರಾಜ್ಯಮಟ್ಟದ ರಾಪಿಡ್ ಚದುರಂಗ ಸ್ಪರ್ಧೆ

ದಾವಣಗೆರೆ, ನ. 4- ಕರ್ನಾಟಕ ರಾಜ್ಯೋತ್ಸವ ಹಾಗೂ ಪವರ್ ಸ್ಟಾರ್ ದಿ. ಪುನೀತ್ ರಾಜ್‌ಕುಮಾರ್ ಸ್ಮರಣಾರ್ಥ ಜಿಲ್ಲಾ ಚೆಸ್ ಕ್ಲಬ್ ವತಿಯಿಂದ ನಾಳೆ ದಿನಾಂಕ 5 ರ ಭಾನುವಾರ ಬೆಳಿಗ್ಗೆ 10 ರಂದು ನಗರದ ಗುರುಭವನದಲ್ಲಿ ಪುನೀತ್ ರಾಜ್‌ಕುಮಾರ್ ಕಪ್ ರಾಜ್ಯಮಟ್ಟದ ಮುಕ್ತ ರಾಪಿಡ್ ಚದುರಂಗ ಸ್ಪರ್ಧೆ ಏರ್ಪಡಿಸಲಾಗಿದೆ ಎಂದು ಜಿಲ್ಲಾ ಕ್ರೀಡಾಪಟುಗಳ ಸಂಘದ ಅಧ್ಯಕ್ಷ ದಿನೇಶ್ ಕೆ. ಶೆಟ್ಟಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಶಾಸಕ ಶಾಮನೂರು ಶಿವಶಂಕರಪ್ಪ ಪಂದ್ಯಾವಳಿಗೆ ಚಾಲನೆ ನೀಡಲಿದ್ದು, ಚದರಂಗ ಕ್ಲಬ್ ಅಧ್ಯಕ್ಷ ದಿನೇಶ್ ಕೆ. ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕರ್ನಾಟಕ ಸ್ಟೇಟ್ ಚೆಸ್ ಅಸೋಸಿಯೇಷನ್ ಸಿಇಓ ಅರವಿಂದ ಶಾಸ್ತ್ರಿ, ಪಾಲಿಕೆ ಸದಸ್ಯರಾದ ಗಡಿಗುಡಾಳ್ ಮಂಜುನಾಥ್, ಎ. ನಾಗರಾಜ್, ಗಣೇಶ್ ಹುಲ್ಮನಿ ಮತ್ತಿತರರು ಭಾಗವಹಿಸಲಿದ್ದಾರೆ. ಅದೇ ದಿನ ಸಂಜೆ ಸಮಾರೋಪ ಸಮಾರಂಭ ನಡೆಯಲಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರು ಪುನೀತ್ ರಾಜ್‌ ಕುಮಾರ್ ಕಪ್ ಪ್ರದಾನ ಮಾಡಲಿದ್ದಾರೆ. ತುಮಕೂರಿನ ಹೆಚ್.ಬಿ. ವಸಂತ್, ಪ್ರಮೋದ್ ರಾಜ್ ಮೋರೆ ತೀರ್ಪುಗಾರರಾಗಿ ಆಗಮಿಸಲಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಯುವರಾಜ್, ತರುಣ್, ಸೌಜನ್ಯ, ಸತೀಶ್ ಶೆಟ್ಟಿ ಉಪಸ್ಥಿತರಿದ್ದರು.  

error: Content is protected !!