ಕಳೆನಾಶಕ ಸೇವಿಸಿ ನರಳಾಡುತ್ತಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ ಸೇರಿಸಿದ ಶಾಸಕರು

ಕಳೆನಾಶಕ ಸೇವಿಸಿ ನರಳಾಡುತ್ತಿದ್ದ  ವ್ಯಕ್ತಿಯನ್ನು ಆಸ್ಪತ್ರೆಗೆ ಸೇರಿಸಿದ ಶಾಸಕರು

ದಾವಣಗೆರೆ, ನ. 17- ಕೀಟನಾಶಕ ಸೇವಿಸಿ ಸಾವು-ಬದುಕಿ ನೊಂದಿಗೆ ಹೋರಾಟ ನಡೆಸುತ್ತಿದ್ದ ಮದ್ಯ ವ್ಯಸನಿಯೊಬ್ಬನನ್ನು ಜಿಲ್ಲಾಸ್ಪತ್ರೆಗೆ ಸೇರಿಸುವ ಮೂಲಕ ಮಾಯಕೊಂಡ ಶಾಸಕ ಕೆ.ಎಸ್. ಬಸವಂತಪ್ಪ ಮಾನವೀ ಯತೆ ಮೆರೆದಿದ್ದಾರೆ. ತಾಲ್ಲೂಕಿನ ಅಣಬೇರು ಗ್ರಾಮದ ಮದ್ಯ ವ್ಯಸನಿ ರೇವಣಸಿದ್ದಪ್ಪ (40) ಎಂಬಾತ ಎಂದಿನಂತೆ ಗುರುವಾರ ಮದ್ಯ ಸೇವನೆ ಮಾಡಿದ್ದಾನೆ. ಕುಡಿದ ಮತ್ತಿನಲ್ಲಿ ಕಳೆನಾಶಕ ಔಷಧಿಯನ್ನು ಸೇವಿಸಿದ್ದಾನೆ. ಇದನ್ನು ಗಮನಿಸಿದ ಕುಟುಂಬದವರು ಆಸ್ಪತ್ರೆಗೆ ಸೇರಿಸಲು ಆಂಬ್ಯುಲೆನ್ಸ್‌ಗೆ ಫೋನ್ ಮಾಡಲು ತಡಕಾಡುವ ವೇಳೆಗೆ ರಾಮಗೊಂಡನಹಳ್ಳಿ ಗ್ರಾಮದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ, ಅದೇ ಗ್ರಾಮದ ಮಾರ್ಗದಲ್ಲಿ ಬರುತ್ತಿದ್ದ ಶಾಸಕ ಬಸವಂತಪ್ಪ, ವಿಷಯ ತಿಳಿದ ಕೂಡಲೇ ವಿಷ ಕುಡಿದ ವ್ಯಕ್ತಿಯನ್ನು ತನ್ನ ಕಾರಿನಲ್ಲಿಯೇ ಸಿ.ಜಿ. ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಬಂದು ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ.  

error: Content is protected !!