ನಗರದಲ್ಲಿ ಇಂದು ರಿಟೇಲ್ ಸಾಲ ಮೇಳ

ಕರ್ನಾಟಕ ಗ್ರಾಮೀಣ ಬ್ಯಾಂಕ್ ದಾವಣಗೆರೆ ಪ್ರಾದೇಶಿಕ ಕಚೇರಿ ವತಿಯಿಂದ ಇಂದು ಬೆಳಿಗ್ಗೆ 10 ಕ್ಕೆ ಕುವೆಂಪು ಕನ್ನಡ ಭವನದಲ್ಲಿ  ರಿಟೇಲ್ ಸಾಲ ಮೇಳವನ್ನು ಆಯೋಜಿಸಲಾಗಿದೆ. ಬ್ಯಾಂಕಿನ ಪ್ರಧಾನ ವ್ಯವಸ್ಥಾಪಕರಾದ ಎಸ್.ಕೆ.ಭಾಗ್ಯರೇಖಾ, ನಿಂಗೇಗೌಡ, ಜಿಲ್ಲಾ ಮಾರ್ಗದರ್ಶಿ ಬ್ಯಾಂಕ್ ವ್ಯವಸ್ಥಾಪಕ ಜಿ.ಸಿ.ಪ್ರಕಾಶ್, ಇಂಡಿಯನ್ ಕಾಂಕ್ರೀಟ್ ಇನ್ಸ್‌ಸ್ಟಿಟ್ಯೂಟ್ ಕಾರ್ಯದರ್ಶಿ ಜಿ.ಬಿ. ಸುರೇಶ್ ಮತ್ತಿತರರು ಭಾಗವಹಿಸಲಿದ್ದು, ದಾವಣಗೆರೆ ಪ್ರಾದೇಶಿಕ ವ್ಯವಸ್ಥಾಪಕ ಪ್ರವೀಣ್ ಕುಮಾರ್ ಪ್ರಭಾಕರ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಹಿರಿಯ ವ್ಯವಸ್ಥಾಪಕ ಸಿ.ಕೆ. ಪ್ರಕಾಶ್ ತಿಳಿಸಿದ್ದದಾರೆ.

error: Content is protected !!