ನಗರದಲ್ಲಿ ಇಂದು ಸಂತ ಕನಕದಾಸರ ಕುರಿತು ಚಿತ್ರಕಲೆ ಮತ್ತು ಪ್ರಬಂಧ ಸ್ಪರ್ಧೆ

ಸಂತ ಕನಕದಾಸರ ಜಯಂತಿ ಕಾರ್ಯಕ್ರಮದ ಅಂಗವಾಗಿ ಇಂದು ಬೆಳಿಗ್ಗೆ 9 ರಿಂದ 12 ರವರೆಗೆ ಶ್ರೀ ಬೀರಲಿಂಗೇಶ್ವರ ಕಲ್ಯಾಣ ಮಂಟಪದಲ್ಲಿ ಸಂತ ಕನಕದಾಸರ ಕುರಿತು ಚಿತ್ರಕಲೆ ಮತ್ತು ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ. ದಾವಣಗೆರೆ ದಕ್ಷಿಣ ಮತ್ತು ಉತ್ತರ ತಾಲ್ಲೂಕಿನ ಪ್ರೌಢ ಶಾಲೆಗಳಿಂದ ತಲಾ 4 ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಲು ಅವಕಾಶವಿರುತ್ತದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ  ಇಲಾಖೆಯ ಉಪನಿರ್ದೇಶಕ ಜಿ. ಕೊಟ್ರೇಶ್ ತಿಳಿಸಿದ್ದಾರೆ.

error: Content is protected !!