ದಾವಣಗೆರೆ, ನ.28- ನಗರದ ಯುನೈಟೆಡ್ ಇಂಟರ್ ನ್ಯಾಷನಲ್ ಶಾಲೆಯಲ್ಲಿ ಸಂವಿಧಾನ ಅಂಗೀಕಾರ ದಿನವನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಬಿ.ದಾದಾಪೀರ್ ಅವರು ಮಾತನಾಡಿ, ಡಾ. ಬಿ.ಆರ್.ಅಂಬೇಡ್ಕರ್ ಅವರ ಜೀವನ ಸಾಧನೆ ಬಗ್ಗೆ ಮಾತನಾಡಿದರು.
ಶಾಲೆಯ ಪ್ರಾಂಶುಪಾಲ ಎಂ.ವಾಸೀಂ ಪಾಷಾ ಅವರು ಸಂವಿಧಾನದ ರಚನೆಯಲ್ಲಿ ಅಂಬೇಡ್ಕರ್ ರವರ ಪಾತ್ರದ ಬಗ್ಗೆ ತಿಳಿಸಿದರು. ಕಾರ್ಯಕ್ರಮದಲ್ಲಿ ಶಾಲಾ ಸಂಯೋಜಕರಾದ ಶರ್ಪುನ್ನೀಸಾ ಹಾಗೂ ಶಾಲಾ ಆಡಳಿತ ಅಧಿಕಾರಿಗಳಾದ ಅಶ್ಫಾಕ್ ಅಹಮದ್ ಉಪಸ್ಥಿತರಿದ್ದರು.