ನಗರದಲ್ಲಿ ಇಂದು ಕನ್ನಡ ರಾಜ್ಯೋತ್ಸವ

ದಾವಣಗೆರೆ, ನ. 29- ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ವೇದಿಕೆ ವತಿಯಿಂದ ನಾಳೆ ದಿನಾಂಕ 30 ರಂದು ಬೆಳಿಗ್ಗೆ 11.30 ಕ್ಕೆ ನಗರದ ಕುವೆಂಪು ಕನ್ನಡ ಭವನದಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ವೇದಿಕೆ ರಾಜ್ಯ ಕಾರ್ಯಾಧ್ಯಕ್ಷರಾದ ಸುವರ್ಣಮ್ಮ ಸುದ್ದಿಗೋಷ್ಠಿಯಲ್ಲಿ  ತಿಳಿಸಿದರು.

ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ರಾಜೇಶ್ವರಿ ಎನ್. ಹೆಗಡೆ ಕಾರ್ಯಕ್ರಮ ಉದ್ಘಾಟಿಸ ಲಿದ್ದು, ಮುಖ್ಯ ಅತಿಥಿಗಳಾಗಿ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರಾದ ಶಿವಪ್ಪ ಗಂಗಪ್ಪ ಸಲಗೆರೆ, ಮಹಾವೀರ ಮ. ಕರೆಣ್ಣವರ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಲ್.ಹೆಚ್. ಅರುಣ್ ಕುಮಾರ್, ಕಾನೂನು ಸಲಹೆಗಾರರಾದ ಉಮಾ ನಾಗಕುಮಾರ ಸ್ವಾಮಿ ಮತ್ತಿತರರು ಭಾಗವಹಿಸಲಿದ್ದಾರೆ.

ಕನ್ನಡ ರಾಜ್ಯೋತ್ಸವದ ಅಂಗವಾಗಿ ನ. 30 ರಂದು ಬೆಳಿಗ್ಗೆ 8 ಕ್ಕೆ ನಿಟುವಳ್ಳಿ ಹೊಸಬಡಾವಣೆಯ 60 ಅಡಿ ರಿಂಗ್ ರಸ್ತೆಯಿಂದ ಕುವೆಂಪು ಕನ್ನಡ ಭವನದವರೆಗೆ ಬೈಕ್ ರಾಲಿ ಹಮ್ಮಿಕೊಳ್ಳಲಾಗಿದೆ.

ವಿಶೇಷ ಆಹ್ವಾನಿತರಾಗಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್, ಜಿಲ್ಲಾಧಿಕಾರಿ ಡಾ.ಎಂ.ವಿ. ವೆಂಕಟೇಶ್, ಮೇಯರ್ ವಿನಾಯಕ ಪೈಲ್ವಾನ್, ಎಸ್ಪಿ ಉಮಾ ಪ್ರಶಾಂತ್ ಭಾಗವಹಿಸಲಿದ್ದಾರೆ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ವೇದಿಕೆ ಪದಾಧಿಕಾರಿಗಳಾದ ಬಿ. ಜಯಪ್ರಕಾಶ್, ನೀತಾ ನಂದೀಶ್, ರವಿಕುಮಾರ್, ಪಿ.ಕೆ. ಮಂಜುನಾಥ್, ಅಕ್ಬರ್ ಬಾಷಾ, ನಿಂಗರಾಜ್ ಜಾಧವ್, ಮಲ್ಲಿಕಾರ್ಜುನ, ದೇವೇಂದ್ರಪ್ಪ ಇದ್ದರು.

error: Content is protected !!