ಹರಿಹರ, ಡಿ. 8 – ತಾಲ್ಲೂಕಿನ ಅಕ್ಷಯ ಆಸ್ಪತ್ರೆ ಆವರಣದಲ್ಲಿ ನಾಡಿದ್ದು ದಿನಾಂಕ 10 ರ ಭಾನುವಾರ ಬೆಳಿಗ್ಗೆ 10ಕ್ಕೆ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ.ಬಿ. ಕೃಷ್ಣಪ್ಪ ಸ್ಥಾಪಿತ), ಅಕ್ಷಯ ಆಸ್ಪತ್ರೆ, ಐ-ದೃಷ್ಟಿ ಕಣ್ಣಿನ ಆಸ್ಪತ್ರೆ, ಬೇಬಿ ಸೈನ್ಸ್, ಎಸ್.ಎಸ್.ನಾರಾಯಣ ಹಾರ್ಟ್ ಆಸ್ಪತ್ರೆ ಸಹಯೋಗದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ 67ನೇ ಮಹಾಪರಿ ನಿಬ್ಬಾಣ ದಿನದ ನಿಮಿತ್ತ ಡಾ.ಬಿ.ಆರ್. ಅಂಬೇಡ್ಕರ್ ರವರ ಸದ್ಭಾವನಾ ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ವಿಚಾರ ಸಂಕಿರಣ, ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಿದೆ.
ಇದೇ ಸಂದರ್ಭದಲ್ಲಿ ಅಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 2ರವರೆಗೆ ನಡೆಯುವ ಆರೋಗ್ಯ ಶಿಬಿರದಲ್ಲಿ ಇಸಿಜಿ, ಶುಗರ್, ಹಿಮೋಗ್ಲೋಬಿನ್, ಎಚ್ಬಿಎ1ಸಿ, 2-ಡಿ, ಇಕೋ, ಕಣ್ಣಿನ ಪರೀಕ್ಷೆಗಳನ್ನು ಉಚಿತವಾಗಿ ತಜ್ಞ ವೈದ್ಯರಿಂದ ನಡೆಸಲಾಗುವುದು.