ದಾವಣಗೆರೆ ಲೋಕಸಭಾ ಕ್ಷೇತ್ರಕ್ಕೆ ರಾಹುಲ್ ಗಾಂಧಿಗೆ ಆಹ್ವಾನ

ಹರಪನಹಳ್ಳಿ, ಡಿ. 10 – ದಾವಣಗೆರೆ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿಯವರನ್ನು ಸ್ಪರ್ಧೆಗೆ ಆಹ್ವಾನಿಸುವುದಾಗಿ ಕೆಪಿಸಿಸಿ ಸದಸ್ಯ ಕಲ್ಲೇಶ್‍ರಾಜ್ ಪಟೇಲ್ ತಿಳಿಸಿದ್ದಾರೆ.

ಕೇಂದ್ರದಲ್ಲಿ ಸರ್ಕಾರ ರಚಿಸಲು ಕಾಂಗ್ರೆಸ್ ಪಕ್ಷಕ್ಕೆ ಉತ್ತಮ ಅವಕಾಶವಿದ್ದು, ರಾಹುಲ್‌ ಗಾಂಧಿಯವರು ಸ್ಪರ್ಧಿಸಲು ಇಚ್ಚಿಸಿದರೆ ದಾವಣಗೆರೆ ಕ್ಷೇತ್ರದಿಂದ ಸ್ವತಃ ಟಿಕೆಟ್ ಆಕಾಂಕ್ಷಿಯಾಗಿರುವ ನಾನು ಹಾಗೂ  ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಸಹ ಸಂತೋಷದಿಂದ ಸ್ವಾಗತಿಸುವುದಾಗಿ ಹೇಳಿದರು.

ಆಕಾಂಕ್ಷಿ: ರಾಹುಲ್‌ ಗಾಂಧಿಯವರು ಸ್ಪರ್ಧೆಯಾಗದಿದ್ದರೆ ನಾನು ಸಹ ದಾವಣಗೆರೆ ಲೋಕಸಭಾ ಕ್ಷೇತ್ರದ ಆಕಾಂಕ್ಷಿಯಾಗಿದ್ದೇನೆ ಎಂದ ಅವರು, ನಾನೂ ಎನ್‍ಎಸ್‍ಯುಐ ವಿದ್ಯಾರ್ಥಿ ಸಂಘಟನೆಯಿಂದ ತಳಮಟ್ಟದ ಕಾರ್ಯಕರ್ತನಾಗಿ ಇಂದು ಕೆಪಿಸಿಸಿ ಸದಸ್ಯರಾಗಿ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿ ಕೆಲಸ ಮಾಡಿರುವ ಹಿನ್ನೆಲೆಯಲ್ಲಿ ನಾನು ಸಹ ಈ ಕ್ಷೇತ್ರದ ಆಕಾಂಕ್ಷಿಯಾಗಿದ್ದೆನೆ ಎಂದರು.

ಮುಂಬೈ-ಪುನಾ-ಬೆಂಗಳೂರು ರಸ್ತೆಗೆ ಸಂಪರ್ಕಿಸುವ ಹರಪನಹಳ್ಳಿ ಹಸಿರು ರಾಷ್ಟ್ರೀಯ ಹೆದ್ದಾರಿಯನ್ನು ಹಿಂದೆ ಸೇರಿಸಲಾಗಿತ್ತು. ಆದರೆ ಪ್ರಸ್ತುತ ಸಂಸದ ಜಿ.ಎಂ.ಸಿದ್ದೇಶ್ವರರವರು ಈ ಬಗ್ಗೆ ನಿರ್ಲಕ್ಷ್ಯ ವಹಿಸಿದ್ದು,  ಅದನ್ನು ಪುನಃ ಸೇರ್ಪಡೆ ಮಾಡಿ, ಹಸಿರು ರಾಷ್ಟ್ರೀಯ ಹೆದ್ದಾರಿಯನ್ನು ಅಭಿವೃದ್ದಿಗೊಳಿಸಬೇಕು ಎಂದು ಹೇಳಿದರು.

error: Content is protected !!