ಗಂಗನರಸಿಯಲ್ಲಿಂದು ಛಟ್ಟಿ ಅಮಾವಾಸ್ಯೆ

ಗಂಗನರಸಿಯಲ್ಲಿಂದು ಛಟ್ಟಿ ಅಮಾವಾಸ್ಯೆ

ಹರಿಹರ ತಾಲ್ಲೂಕು ಗಂಗನರಸಿಯ ಶ್ರೀ ಗೋಣಿ ಬಸವೇಶ್ವರ ಸ್ವಾಮಿ ಹೊರಮಠ, ಶ್ರೀ ಹನುಮಂತ ದೇವರ ಜೀರ್ಣೋದ್ಧಾರ ಸಮಿತಿಯಿಂದ ಇಂದು ಬೆಳಿಗ್ಗೆ 11 ಗಂಟೆಗೆ ಅಮಾವಾಸ್ಯೆ ವಿಶೇಷ ಪೂಜೆ ನಡೆಯಲಿದೆ. ಬೆಳಿಗ್ಗೆ 11 ಕ್ಕೆ ಶ್ರೀ ಗೋಣಿ ಬಸವೇಶ್ವರ, ನಾಗದೇವತಾ ಸ್ವಾಮಿಗಳಿಗೆ ವಿಶೇಷ ಪೂಜೆ, ಅಭಿಷೇಕ ನಡೆಯುವುದು. ನಂತರ 11.30 ಕ್ಕೆ ಮಹಾ ಪ್ರಸಾದ ಸೇವೆ ಯನ್ನು ತಾಲ್ಲೂಕಿನ ಹಳೇ ಹರ್ಲಾಪುರದ ಪೇಟಾ ಬಸಪ್ಪರ ಹೆಚ್. ಮಂಜುನಾಥ ಸುನೀತಾ ಮತ್ತು ಮಕ್ಕಳು ಏರ್ಪಡಿಸಿದ್ದಾರೆ ಎಂದು ಸಮಿತಿಯ ಅಧ್ಯಕ್ಷ ಜಿ.ಎಂ. ನಾಗೇಂದ್ರಪ್ಪ ಮತ್ತು ಪ್ರಧಾನ ಕಾರ್ಯದರ್ಶಿ ಗೌಡ್ರ ಚನ್ನಬಸಪ್ಪ ತಿಳಿಸಿದ್ದಾರೆ.

error: Content is protected !!