ನಾಳೆ ವಿದ್ಯಾರ್ಥಿಗಳಿಗೆ ಪ್ರಬಂಧ, ಚರ್ಚಾ ಸ್ಪರ್ಧೆ

ದಾವಣಗೆರೆ, ಡಿ. 14 – ಜಿಲ್ಲಾ ಸಹಕಾರ ಒಕ್ಕೂಟ ನಿಯಮಿತ, ಸಹಕಾರ ಇಲಾಖೆ ಇವರುಗಳ ಸಹಯೋಗದೊಂದಿಗೆ ನಾಡಿದ್ದು ದಿನಾಂಕ 16 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಹೈಸ್ಕೂಲ್ ಮೈದಾನದಲ್ಲಿ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯಲ್ಲಿ ಪ್ರೌಢಶಾಲೆ ವಿದ್ಯಾರ್ಥಿ, ವಿದ್ಯಾರ್ಥಿನಿಯರುಗಳಿಗೆ ಪ್ರಬಂಧ ಸ್ಪರ್ಧೆಯನ್ನು ಮತ್ತು ಪದವಿ ಪೂರ್ವ ಕಾಲೇಜು ವಿದ್ಯಾರ್ಥಿ ವಿದ್ಯಾರ್ಥಿನಿಯರುಗಳಿಗೆ ಚರ್ಚಾ ಸ್ಪರ್ಧೆಯನ್ನು ಆಯೋಜಿಸಲಾಗಿದೆ.

ಚರ್ಚಾ ಸ್ಪರ್ಧೆಯ ವಿಷಯ : ಬಡತನ ನಿರ್ಮೂಲನೆ, ಉದ್ಯೋಗ ಸೃಷ್ಟಿ, ಸಾಮಾಜಿಕ ನ್ಯಾಯ ವಿತರಣೆಗಳು ಸಹಕಾರಿ ವಲಯದಿಂದ ಮಾತ್ರವೇ ಜಾರಿಗೊಳಿಸಲು ಸಾಧ್ಯ.

ಪ್ರಬಂಧ ಸ್ಪರ್ಧೆಯ ವಿಷಯ : ರಾಷ್ಟ್ರದ ಅರ್ಥವ್ಯವಸ್ಥೆಯ ಬೆಳವಣಿಗೆಗಳಲ್ಲಿ ಸಹಕಾರಿ ವಲಯದ ಪಾತ್ರ.  ವಿವರಕ್ಕೆ 8971009568, 8073317302, 99861 73736ಕ್ಕೆ ಸಂಪರ್ಕಿಸಬಹುದು

error: Content is protected !!