18 ರಂದು ಶ್ರೀ ವಿಶ್ವಬಂಧು ಮರುಳಸಿದ್ಧೇಶ್ವರ ದೇವಸ್ಥಾನದಲ್ಲಿ ಸಹಸ್ರ ದೀಪೋತ್ಸವ

18 ರಂದು ಶ್ರೀ ವಿಶ್ವಬಂಧು ಮರುಳಸಿದ್ಧೇಶ್ವರ ದೇವಸ್ಥಾನದಲ್ಲಿ ಸಹಸ್ರ ದೀಪೋತ್ಸವ

ದಾವಣಗೆರೆ, ಡಿ. 15-  ನಗರದ ಶಾಮನೂರು ಶಿವಶಂಕರಪ್ಪ ಪಾರ್ವತಮ್ಮ ಸಮುದಾಯ ಭವನದ ಆವರಣದಲ್ಲಿರುವ ಶ್ರೀ ವಿಶ್ವಬಂಧು ಮರುಳಸಿದ್ಧೇಶ್ವರ ದೇವಸ್ಥಾನದಲ್ಲಿ ಇದೇ ದಿನಾಂಕ 18 ರ ಸೋಮವಾರ ಸಂಜೆ 7.30ಕ್ಕೆ 16 ನೇ ವರ್ಷದ ಕಾರ್ತಿಕೋತ್ಸವದ ಪ್ರಯುಕ್ತ ಸಹಸ್ರ ದೀಪೋತ್ಸವ ಹಾಗೂ ಸಾಂಸ್ಕೃತಿಕ ವೈಭವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. 

ತರಳಬಾಳು ಜಗದ್ಗುರು ಡಾ.ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳು ಸಾನ್ನಿಧ್ಯ ವಹಿಸಲಿದ್ದಾರೆ. ಅಂದು ಸಂಜೆ 6.30 ಕ್ಕೆ ತರಳಬಾಳು ಬಡಾವಣೆಯ ಶಿವಕುಮಾರಸ್ವಾಮಿ ಮಹಾಮಂಟಪದಲ್ಲಿರುವ ಶ್ರೀ ಮರುಳಸಿದ್ದೇಶ್ವರ ದೀಪೋತ್ಸವ ಕಾರ್ಯಕ್ರಮಕ್ಕೆ ಜಗದ್ಗುರುಗಳು ಚಾಲನೆ ನೀಡಲಿದ್ದಾರೆ.

ನಂತರ ಕಲ್ಯಾಣ ಮಂಟಪದಲ್ಲಿ ತರಳಬಾಳು ಪ್ರೌಢಶಾಲೆ, ಶ್ರೀ ಮಾಗನೂರು ಬಸಪ್ಪ ಪ್ರೌಢಶಾಲೆ, ಶ್ರೀ ಕೊಂಡಜ್ಜಿ ಬಸಪ್ಪ ಪ್ರೌಢಶಾಲೆ, ತರಳಬಾಳು ಆಂಗ್ಲ ಮಾಧ್ಯಮ ಪ್ರೌಢಶಾಲೆ (ಎಲೇಬೇತೂರು)  ಮತ್ತು ಶ್ರೀ ತುಳಸಿ ಮಹಿಳಾ ಸಂಘ (ಸಿದ್ಧವೀರಪ್ಪ ಬಡಾವಣೆ) ಇವರಿಂದ ಸಾಂಸ್ಕೃತಿಕ ವೈಭವ ಕಾರ್ಯಕ್ರಮ ಏರ್ಪಡಿಸಲಾಗಿದೆ. 

error: Content is protected !!