ಹರಿಹರ : ನಂದಿಗಾವಿ ಶ್ರೀನಿವಾಸ್ ಹುಟ್ಟುಹಬ್ಬ ಆಚರಣೆಗೆ ಸಿದ್ಧತೆ

ಹರಿಹರ : ನಂದಿಗಾವಿ ಶ್ರೀನಿವಾಸ್ ಹುಟ್ಟುಹಬ್ಬ ಆಚರಣೆಗೆ ಸಿದ್ಧತೆ

ಹರಿಹರ, ಡಿ,17 – ಇದೇ ದಿನಾಂಕ 21 ರಂದು ಕಾಂಗ್ರೆಸ್ ಪಕ್ಷದ ಮುಖಂಡ ನಂದಿಗಾವಿ ಶ್ರೀನಿವಾಸ್ ಅವರ ಹುಟ್ಟು ಹಬ್ಬವನ್ನು ಸರಳವಾಗಿ ಆಚರಿಸಲು ನಂದಿಗಾವಿ ಶ್ರೀನಿವಾಸ್ ಸ್ನೇಹ ಬಳಗ ನಿರ್ಧರಿಸಿದೆ ಎಂದು ನಗರಸಭೆ ಸದಸ್ಯ ಕೆ.ಜಿ. ಸಿದ್ದೇಶ್ ತಿಳಿಸಿದ್ದಾರೆ.

ನಗರದ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿ ಯಲ್ಲಿ ಅವರು ಮಾತನಾಡಿದರು. ರಾಜ್ಯದಲ್ಲಿ ಭೀಕರ ಬರಗಾಲದ ಜೊತೆಗೆ ತಾಲ್ಲೂಕಿನಲ್ಲೂ ಕೂಡ ಹೆಚ್ಚಿನ ಪ್ರಮಾಣದಲ್ಲಿ ಬರಗಾಲ ಇರುವುದರಿಂದ ಹುಟ್ಟು ಹಬ್ಬವನ್ನು  ಆಡಂಬರದ ಕಾರ್ಯಕ್ರಮ ಹಮ್ಮಿಕೊಳ್ಳದೆ ಸರಳವಾಗಿ ಆಚರಿಸಲಾಗುತ್ತಿದೆ ಎಂದರು.   

ಇದೇ ದಿನಾಂಕ 21 ರಂದು ಬೆಳಗ್ಗೆ 11 ಗಂಟೆಗೆ ಸ್ನೇಹ ಬಳಗದ ವತಿಯಿಂದ ಹರಿಹರ ಮತ್ತು ಮಲೇಬೆನ್ನೂರಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಾಲು, ಹಣ್ಣು, ಹಂಪಲು ವಿತರಣೆ ಮಾಡಲಾಗುತ್ತದೆ. ನಗರದ ಗಾಂಧಿ ಮೈದಾನದಲ್ಲಿ 28 ಜೊತೆ ಕುಸ್ತಿ ಪಂದ್ಯವನ್ನು ಏರ್ಪಡಿಸಲಾಗಿದೆ. ಆ ಸಮಯದಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಹಾರ, ಶಾಲು, ಪೇಟ ಮತ್ತು ಕೇಕ್ ತೆಗೆದುಕೊಂಡು ಬರದೇ ಶುಭಾಶಯಗಳನ್ನು ತಿಳಿಸುವುದಕ್ಕೆ ಅವಕಾಶ ಮಾಡಿಕೊಡಲಾಗುವುದು. ಅಭಿಮಾನಿಗಳಿಗೆ ಉಪಹಾರ ವ್ಯವಸ್ಥೆ ಮಾಡಲಾಗಿದೆ. ಯುವ ಬ್ರಿಗೇಡ್ ವತಿಯಿಂದ ಹೆಚ್.ಐ.ವಿ. ಕಾಯಿಲೆಯನ್ನು ಹೊಂದಿರುವ ಮಕ್ಕಳಿಗೆ ಉಚಿತ ಪಠ್ಯ ಪುಸ್ತಕ, ಊಟದ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ನಗರಸಭೆ ಸದಸ್ಯ ಎಂ.ಎಸ್. ಬಾಬುಲಾಲ್, ಮಲ್ಲೇಶ್ ಕಮಲಪುರ, ಕಿರಣ್ ಭೂತೆ, ಸಂತೋಷ ನೋಟದರ್, ಮಂಜುನಾಥ್ ಹಳ್ಳಳ್ಳಿ, ತಿಪ್ಪೇ ಸ್ವಾಮಿ, ಭರತ್, ಸಂತೋಷ್‌ ಇತರರು ಹಾಜರಿದ್ದರು. 

error: Content is protected !!