ಎಂಸಿಸಿ `ಎ’ ಬ್ಲಾಕ್ನಲ್ಲಿರುವ ಶ್ರೀ ಶಿರಡಿ ಸಾಯಿಬಾಬಾ ಮಂದಿರದಲ್ಲಿ ಇಂದು ಶ್ರೀ ದತ್ತಾತ್ರೇಯ ಜಯಂತಿ ಮತ್ತು ಹುಣ್ಣಿಮೆಯ ಪ್ರಯುಕ್ತ ಶ್ರೀ ದತ್ತಾತ್ರೇಯ ಸ್ವಾಮಿ ಮೂರ್ತಿಗೆ ಬೆಳಿಗ್ಗೆ 8 ಗಂಟೆಗೆ ವಿಶೇಷ ಅಭಿಷೇಕ ಮತ್ತು ವಿಶೇಷ ಹೂವಿನ ಅಲಂಕಾರ ಏರ್ಪಡಿಸಲಾಗಿದೆ.
ಬೆಳಿಗ್ಗೆ 8.30 ರಿಂದ ಮಂದಿರದಲ್ಲಿ ಸೇವೆ ಮಾಡುವ ಸದಸ್ಯರಿಂದ ಶ್ರೀ ವಿಷ್ಣು ಸಹಸ್ರನಾಮ ಮತ್ತು ಭಜನೆ ಕಾರ್ಯಕ್ರಮ, ಬೆಳಿಗ್ಗೆ 10.30ಕ್ಕೆ ಸಾಯಿ ಭಜನಾಮೃತ ಸದಸ್ಯರಿಗೆ ಭಜನೆ, ಶ್ರೀ ಸಾಯಿ ಧ್ಯಾನ ಮಂದಿರದಲ್ಲಿ ಬೆಳಿಗ್ಗೆ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, ಮಧ್ಯಾಹ್ನ 12 ಗಂಟೆಗೆ ಆರತಿ ಮತ್ತು ಪ್ರಸಾದ ವಿನಿಯೋಗ ಏರ್ಪಡಿಸಲಾಗಿದೆ ಎಂದು ಸಾಯಿ ಟ್ರಸ್ಟ್ನ ಕಾರ್ಯದರ್ಶಿ ಎಂ. ಶಿವಪ್ಪ ತಿಳಿಸಿದ್ದಾರೆ.