ಭಗೀರಥ ಉಪ್ಪಾರ ಸಮಾಜದ ಪ್ರತಿಭಾ ಪುರಸ್ಕಾರಕ್ಕೆ ವಿದ್ಯಾರ್ಥಿಗಳಿಂದ ಅರ್ಜಿ

ದಾವಣಗೆರೆ, ಡಿ.26- ಜಿಲ್ಲಾ ಭಗೀರಥ ಉಪ್ಪಾರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ 2022-23 ನೇ ಸಾಲಿನ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪುರಸ್ಕಾರ ಸಮಾರಂಭವು ಇದೇ ದಿನಾಂಕ 28 ರಂದು ನಡೆಯಲಿದೆ. ಆಸಕ್ತ ವಿದ್ಯಾರ್ಥಿಗಳು ಹೆಸರನ್ನು ನಗರದ ಎಂ.ಸಿ.ಸಿ. `ಬಿ’ ಬ್ಲಾಕ್‌ನಲ್ಲಿರುವ   ಉಪ್ಪಾರ ವಿದ್ಯಾರ್ಥಿ ನಿಲಯದ ಕಛೇರಿಯಲ್ಲಿ ನೋಂದಾಯಿಸಬಹುದು.ವಿವರಗಳಿಗೆ : ರಮೇಶ್‌ ಎಂ.ಸಿ. (ಮೊ: 94485 67515), ಹಾಲೇಶ್‌ ಹೆಚ್‌.ಎಸ್‌. (ಮೊ: 9844207701),  ನಾಗರಾಜ್ ಎನ್‌. (ಮೊ: 98441 01183) ಇವರುಗಳಿಗೆ ಸಂಪರ್ಕಿಸಲು ಪ್ರಧಾನ ಕಾರ್ಯದರ್ಶಿ ಎನ್‌. ನಾಗರಾಜ ತಿಳಿಸಿದ್ದಾರೆ.

error: Content is protected !!