ಮಹಾಸಭಾದ ರಾಷ್ಟ್ರೀಯ ಅಧಿವೇಶನ ಯಶಸ್ಸಿಗೆ ಶಾಸಕ ಎಸ್ಸೆಸ್‌ ಧನ್ಯವಾದ

ಮಹಾಸಭಾದ ರಾಷ್ಟ್ರೀಯ ಅಧಿವೇಶನ ಯಶಸ್ಸಿಗೆ ಶಾಸಕ ಎಸ್ಸೆಸ್‌ ಧನ್ಯವಾದ - Janathavaniದಾವಣಗೆರೆ, ಡಿ. 26- ಇಲ್ಲಿನ ಬಾಪೂಜಿ ಎಂ.ಬಿ.ಎ. ಕಾಲೇಜು ಮೈದಾನದಲ್ಲಿ ಎರಡು ದಿನಗಳ ಕಾಲ ನಡೆದ ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾ ಅಧಿವೇಶನದ ಯಶಸ್ಸಿಗೆ ಶ್ರಮಿಸಿದ ಎಲ್ಲರಿಗೂ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರೂ ಆಗಿರುವ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಧನ್ಯವಾದ ಸಲ್ಲಿಸಿದ್ದಾರೆ. ಅಧಿವೇಶನ ದಲ್ಲಿ ದಿವ್ಯ ಸಾನ್ನಿಧ್ಯ ವಹಿಸಿದ್ದ ಹರ-ಗುರು ಚರಮೂರ್ತಿಗಳಿಗೆ, ಮುಖ್ಯ ಅತಿಥಿಗಳಿಗೆ, ಉಪನ್ಯಾಸ ಹಾಗೂ ದಿಕ್ಸೂಚಿ ನುಡಿಗಳನ್ನಾಡಿದ ಗಣ್ಯರಿಗೆ, ರಾಜಕೀಯ ನಾಯಕರಿಗೆ, ಸಹಕಾರ ನೀಡಿದ ಜಿಲ್ಲಾಡಳಿತ, ಪೊಲೀಸ್ ಇಲಾಖೆಗೆ, ಮಹಾಸಭಾದ ಪದಾಧಿಕಾರಿಗಳಿಗೆ ಸೇರಿದಂತೆ ಪ್ರತ್ಯಕ್ಷ-ಪರೋಕ್ಷವಾಗಿ ಸಹಕರಿಸಿದ ಎಲ್ಲರಿಗೂ ಅವರು ಧನ್ಯವಾದ ಹೇಳಿದ್ದಾರೆ.

error: Content is protected !!