ನಗರದಲ್ಲಿ ಇಂದು ಆರೋಗ್ಯ, ಕಣ್ಣಿನ ತಪಾಸಣೆ

ದಾವಣಗೆರೆ, ಡಿ. 28- ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಶಾಖೆ, ಸಂಕಲ್ಪ ಸೇವಾ ಫೌಂಡೇಶನ್, ಸಿಟಿ ಸೆಂಟ್ರಲ್ ಹಾಸ್ಪಿಟಲ್ ಹಾಗೂ ದಾವಣಗೆರೆ ನೇತ್ರಾಲಯದ ಸಹಯೋಗದಲ್ಲಿ ನಾಳೆ ದಿನಾಂಕ 29ರ ಶುಕ್ರವಾರ ಉಚಿತ ಆರೋಗ್ಯ ಹಾಗೂ ಕಣ್ಣಿನ ತಪಾಸಣಾ ಶಿಬಿರ ಮತ್ತು 2024ನೇ ಸಾಲಿನ ಕ್ಯಾಲೆಂಡರ್ ಬಿಡುಗಡೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ವೀರೇಶ್‌ ಎಸ್. ಒಡೇನಪುರ, ನಿಜಲಿಂಗಪ್ಪ ಬಡಾವಣೆಯಲ್ಲಿನ ಸರ್ಕಾರಿ ನೌಕರರ ಭವನದಲ್ಲಿ ಅಂದು ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಶಿಬಿರ ನಡೆಯಲಿದ್ದು, ಬೆಳಿಗ್ಗೆ 11.30ಕ್ಕೆ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.
ಅಪರ ಜಿಲ್ಲಾಧಿಕಾರಿ ಪಿ.ಎನ್. ಲೋಕೇಶ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಡಿಹೆಚ್‌ಒ ಡಾ.ಷಣ್ಮುಖಪ್ಪ ಎಸ್., ಸಂಕಲ್ಪ ಸೇವಾ ಫೌಂಡೇಷನ್ ಅಧ್ಯಕ್ಷ ಜಿ.ಮಹಾಂತೇಶ್, ಸಿಟಿ ಸೆಂಟ್ರಲ್ ಆಸ್ಪತ್ರೆ ಅಧ್ಯಕ್ಷ ಡಾ. ಹೆಚ್‌.ಎಲ್‌. ಸುಬ್ಬಾರಾವ್, ಕೀಲು ಮೂಳೆ ಶಸ್ತ್ರ ಚಿಕಿತ್ಸಾ ತಜ್ಞ ಡಾ.ಷಣ್ಮುಖಪ್ಪ ಎಸ್., ನೇತ್ರ ತಜ್ಞ ಡಾ. ಸುನೀಲ್ ಜಿ. ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಸಂಕಲ್ಪ ಸೇವಾ ಫೌಂಡೇಷನ್ ಅಧ್ಯಕ್ಷ ಜಿ.ಮಹಾಂತೇಶ್, ಸರ್ಕಾರಿ ನೌಕರರ ಸಂಘದ ಕಾರ್ಯಾಧ್ಯಕ್ಷ ಬಿ.ಪಾಲಾಕ್ಷಿ, ಖಜಾಂಚಿ ತಿಪ್ಪೇಸ್ವಾಮಿ ಬಿ.ಆರ್., ಗೌರವಾಧ್ಯಕ್ಷ ಸಿ.ತಿಪ್ಪೇಸ್ವಾಮಿ, ರಾಜ್ಯ ಪರಿಷತ್ ಸದಸ್ಯೆ ಮಂಜಮ್ಮ, ಸುಹೇಲ್‌, ಸಿದ್ದೇಶ್, ಧರ್ಮಪ್ಪ, ಕಿರಣ್ ಕುಮಾರ್, ಮಾಲಾ, ಹರ್ಷಿತ ಇತರರಿದ್ದರು.

error: Content is protected !!