ದಾವಣಗೆರೆ ನಗರ ದೇವತೆ ಶ್ರೀ ದುರ್ಗಾಂಬಿಕಾ ದೇವಿಯ ಕಡೇ ಕಾರ್ತಿಕೋತ್ಸವವು ಇಂದು ರಾತ್ರಿ 8:30 ಗಂಟೆಗೆ ನೆರವೇರಲಿದೆ.
ಟ್ರಸ್ಟ್ನ ಗೌರವ ಅಧ್ಯಕ್ಷರೂ ಆದ ಹಿರಿಯ ಶಾಸಕ ಶಾಮ ನೂರು ಶಿವಶಂಕರಪ್ಪ, ಟ್ರಸ್ಟ್ನ ಕಾರ್ಯಾಧ್ಯಕ್ಷರೂ ಆದ ಜಿಲ್ಲಾ ಉಸ್ತುವಾರಿ ಸಚಿವ ಶಾಮನೂರು ಮಲ್ಲಿಕಾರ್ಜುನ್ ಅವರು ಕಾರ್ತಿಕೋತ್ಸವಕ್ಕೆ ಚಾಲನೆ ನೀಡುವರು ಎಂದು ಧರ್ಮದರ್ಶಿ ಗೌಡ್ರ ಚನ್ನಬಸಪ್ಪ ತಿಳಿಸಿದ್ದಾರೆ.