ದಾವಣಗೆರೆ, ಜ. 7- ಕದಳಿ ಮಹಿಳಾ ವೇದಿಕೆಯ 15ನೇ ವಾರ್ಷಿಕೋತ್ಸವ ಹಾಗೂ ಕದಳಿ ಶ್ರೀ ಪ್ರಶಸ್ತಿ ಪ್ರಧಾನ ಸಮಾರಂಭವು ನಾಡಿದ್ದು ದಿನಾಂಕ 9ರ ಮಂಗಳವಾರ ಶಾಮನೂರು ಶಿವಶಂಕರಪ್ಪ ಪಾರ್ವತಮ್ಮ ಕಲ್ಯಾಣ ಮಂಟಪದಲ್ಲಿ ನಡೆಯಲಿದೆ.
ಸಿರಿಗೆರೆಯ ಎಂ.ಬಿ.ಆರ್. ಕಾಲೇಜಿನ ನಿವೃತ್ತ ಪ್ರಾಚಾರ್ಯರಾದ ಪ್ರೊ. ಟಿ. ನೀಲಾಂಬಿಕೆ ಅವರಿಗೆ ಈ ಬಾರಿಯ ಕದಳಿ ಶ್ರೀ ಪ್ರಶಸ್ತಿ ನೀಡಲಾಗುವುದು ಎಂದು ಕದಳಿ ಮಹಿಳಾ ವೇದಿಕೆಯ ಕಾರ್ಯದರ್ಶಿ ಶ್ರೀಮತಿ ಚಂದ್ರಿಕಾ ಮಂಜುನಾಥ್ ತಿಳಿಸಿದ್ದಾರೆ.