ಜಿಲ್ಲಾ ಮಟ್ಟದ ವಿಶೇಷ ಚೇತನರ ಕ್ರೀಡಾಕೂಟದಲ್ಲಿ ವಿದ್ಯಾರ್ಥಿಗಳ ಸಾಧನೆ

ಜಿಲ್ಲಾ ಮಟ್ಟದ ವಿಶೇಷ ಚೇತನರ ಕ್ರೀಡಾಕೂಟದಲ್ಲಿ ವಿದ್ಯಾರ್ಥಿಗಳ ಸಾಧನೆ

ದಾವಣಗೆರೆ, ಜ. 9 – ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಇಂದು ಜರುಗಿದ    ಜಿಲ್ಲಾ ಮಟ್ಟದ ವಿಶೇಷಚೇತನರ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ವಿದ್ಯಾರ್ಥಿಗಳ ಕ್ರೀಡಾಕೂಟದಲ್ಲಿ ಶ್ರೀ ವಿನಾಯಕ ಎಜುಕೇಷನ್‌ ಸೊಸೈಟಿಯ   ಡಿಸಿಎಂ ಕ್ವಾಟ್ರಸ್‌ನ ಶ್ರೀ ಮೌನೇಶ್ವರಿ ಶ್ರವಣನ್ಯೂನತೆ ಮಕ್ಕಳ ವಸತಿಯುತ ಶಾಲೆಯ ವಿದ್ಯಾರ್ಥಿಗಳು ಸ್ಪರ್ಧಿಸಿ ಪ್ರಥಮ 11, ದ್ವಿತೀಯ 12 ಹಾಗೂ ತೃತೀಯ 10 ಕ್ರಮವಾಗಿ ಚಿನ್ನ, ಬೆಳ್ಳಿ ಮತ್ತು ಕಂಚಿನ ಪದಕಗಳನ್ನು ಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.  ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಅಧಿಕಾರಿಗಳು ಹಾಗೂ ಜಿಲ್ಲಾ ವಿಕಲಚೇತನರ ಇಲಾಖೆ ಅಧಿಕಾರಿ ಪ್ರಕಾಶ್ ಉಪಸ್ಥಿತರಿದ್ದರು. ಸಂಸ್ಥೆಯ ಕಾರ್ಯದರ್ಶಿ ಹೆಚ್‌.ವಿ. ಗೋಪಾಲಪ್ಪ, ಶಾಲಾ ಆಡಳಿತ ಮಂಡಳಿ, ಸಿಬ್ಬಂದಿ ವರ್ಗದವರು ಮಕ್ಕಳನ್ನು ಅಭಿನಂದಿಸಿದರು.

error: Content is protected !!