ನಗರದಲ್ಲಿ ಇಂದು ಮಕರ ಸಂಕ್ರಾಂತಿ ಜ್ಯೋತಿಪೂಜೆ, ಅನ್ನ ಸಂತರ್ಪಣೆ

ಪಿ.ಬಿ. ರಸ್ತೆಯ ಶ್ರೀ ಬೀರಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ  ಶ್ರೀ ಶಬರಿಮಲೈ ಅಯ್ಯಪ್ಪ ಸ್ವಾಮಿ ಭಕ್ತವೃಂದ ಮಂಡಳಿಯಿಂದ ಮಕರ ಸಂಕ್ರಾಂತಿ ಜ್ಯೋತಿಪೂಜೆ ಮತ್ತು ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಇಂದು ಏರ್ಪಡಿಸಲಾಗಿದೆ.

ಬೆಳಿಗ್ಗೆ 11 ಗಂಟೆಗೆ ಅಭಿಷೇಕ, ಸಂಜೆ 6ಕ್ಕೆ ಮಹಾಮಂಟಪದಲ್ಲಿ ಶ್ರೀ ಮಹಾಗಣಪತಿ, ಶ್ರೀ ಸುಬ್ರಹ್ಮಣ್ಯಸ್ವಾಮಿ, ಶ್ರೀ ಅಯ್ಯಪ್ಪಸ್ವಾಮಿಯನ್ನು ಪ್ರತಿಷ್ಠಾಪನೆ ಮಾಡುವುದು, ಸಂಜೆ 6.30ಕ್ಕೆ ಜ್ಯೋತಿ ಪೂಜೆ ಕಾರ್ಯಕ್ರಮ ಸಂಜೆ 7ಕ್ಕೆ ಅಯ್ಯಪ್ಪ ಸ್ವಾಮಿ ಭಜನಾ ಕಾರ್ಯಕ್ರಮ ನಂತರ ಪಡಿಪೂಜೆ, ಮಹಾಮಂಗಳಾರತಿ ನಂತರ ಪ್ರಸಾದ ವಿನಿಯೋಗ ನಡೆಯಲಿದೆ.

error: Content is protected !!