ಅನಂತ್‍ಕುಮಾರ್ ಹೆಗಡೆ ಸಿಎಂ ಕ್ಷಮೆ ಯಾಚಿಸಲಿ

ಅನಂತ್‍ಕುಮಾರ್ ಹೆಗಡೆ ಸಿಎಂ ಕ್ಷಮೆ ಯಾಚಿಸಲಿ

ಹರಪನಹಳ್ಳಿ, ಜ.18- ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಏಕವಚನ ಬಳಸಿದ ಸಂಸದ ಅನಂತ್‍ಕುಮಾರ್ ಹೆಗಡೆ ಅವರು ಕೂಡಲೇ ಸಿಎಂ ಕ್ಷಮೆ ಯಾಚಿಸಬೇಕು ಎಂದು ರಾಜ್ಯ ಯುವ ಕಾಂಗ್ರೆಸ್ ವಕ್ತಾರ ಹಾಗೂ ಬಳ್ಳಾರಿ ಗ್ರಾಮೀಣ, ವಿಜಯನಗರ ಯುವ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಕೆ.ರಿಯಾಜ್ ಆಗ್ರಹಿಸಿದರು.

ಈ ಕುರಿತು ಪತ್ರಿಕೆಗೆ ಪ್ರತಿಕ್ರಿಯಿಸಿದ ರಿಯಾಜ್ ಅವರು, ಸಿದ್ದರಾಮಯ್ಯನವರು ಜನರಿಂದ ಆಯ್ಕೆಯಾದ ಮುಖ್ಯಮಂತ್ರಿ. ಅದಕ್ಕೆ ಗೌರವ ಕೊಡಬೇಕಾಗಿ ರೋದು ಎಲ್ಲರ ಧರ್ಮ. ಅನಂತ್‍ಕುಮಾರ್ ಹೆಗಡೆ ಯಾವುದೇ ಪಕ್ಷದಿಂದ ಗೆದ್ದಿರಬಹುದು. ಆ ರೀತಿಯ ಮಾತು ಯಾರಿಗೂ ಶೋಭೆಯಲ್ಲ. ಅವರು ಈ ಹಿಂದೆ ಡಾ.ಅಂಬೇಡ್ಕರ್ ಬಗ್ಗೆಯೂ ಅವಹೇಳನಕಾರಿ ಮಾತನಾಡಿದ್ದಾರೆ. ಹಿಂದೂ ಧರ್ಮಕ್ಕೆ ಅವಹೇಳನ ಮಾಡುತ್ತಿದ್ದಾರೆ. ಸಂವಿಧಾನ ಬದಲಾವಣೆ ಮಾಡುತ್ತೇನೆ ಎನ್ನುತ್ತಾರೆ. ಸಂವಿಧಾನ ಇವರೊಬ್ಬರಿಗೆ ಬರೆದು ಕೊಟ್ಟಿದ್ದಾರಾ ಎಂದು ಕಿಡಿಕಾರಿದರು.  ಎಲೆಕ್ಷನ್ ಬಂದ ಕೂಡಲೇ ಇವರಿಗೆಲ್ಲ ಹಿಂದುತ್ವ ನೆನಪಾಗುತ್ತದೆ. ಎಲೆಕ್ಷನ್ ಮುಗಿದ ಮೇಲೆ ಎಲ್ಲವೂ ಬಂದ್ ಆಗುತ್ತದೆ. ಇವೆಲ್ಲವೂ ಎಲೆಕ್ಷನ್ ಗಿಮಿಕ್‍ಗಳು ಎಂದು ರಿಯಾಜ್ ತಿಳಿಸಿದರು.

error: Content is protected !!