ದಾವಣಗೆರೆ, ಜ. 18- ಚೌಕಿಪೇಟೆಯಲ್ಲಿರುವ ಶ್ರೀ ಗುರು ಶಿವಯೋಗಿ ಬಕ್ಕೇಶ್ವರ ದೇವಸ್ಥಾನದ ಆವರಣದಲ್ಲಿ ಈಚೆಗೆ ನಡೆದ ಶ್ರೀ ಗುರು ಶಿವಯೋಗಿ ಮಹಾರುದ್ರ ಸ್ವಾಮೀಜಿ ಅವರ ಪುರಾಣ ಪ್ರವಚನದ ಪ್ರಾರಂಭೋತ್ಸವ ಕಾರ್ಯಕ್ರಮವನ್ನು ವೀರೇಶ್ವರ ಪುಣ್ಯಾಶ್ರಮದ ಪೀಠಾಧಿಪತಿ ಶ್ರೀ ಕಲ್ಲಯ್ಯಜ್ಜ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಹೆಬ್ಬಾಳು ವಿರಕ್ತಮಠದ ಶ್ರೀ ಮಹಾಂತ ರುದ್ರೇಶ್ವರ ಸ್ವಾಮೀಜಿ, ಶ್ರೀ ಬಂಡಯ್ಯ ಶಾಸ್ತ್ರಿ, ಉದ್ಯಮಿ ಅಥಣಿ ಎಸ್. ವೀರಣ್ಣ, ಬಸವರಾಜ್, ಅಜ್ಜಂಪುರ ಮೃತ್ಯುಂಜಯ, ರಾಜಶೇಖರ್ ಗುಂಡಗಟ್ಟಿ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.