ಡಿಡಿಸಿಸಿ ಬ್ಯಾಂಕ್‌ ಚುನಾವಣೆ ಕೋಗುಂಡಿ ಬಕ್ಕೇಶಪ್ಪ ನಾಮಪತ್ರ ಸಲ್ಲಿಕೆ

ಡಿಡಿಸಿಸಿ ಬ್ಯಾಂಕ್‌ ಚುನಾವಣೆ  ಕೋಗುಂಡಿ ಬಕ್ಕೇಶಪ್ಪ ನಾಮಪತ್ರ ಸಲ್ಲಿಕೆ

ದಾವಣಗೆರೆ,ಜ.18- ದಾವಣಗೆರೆ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಆಡಳಿತ ಮಂಡಳಿಗೆ ಇದೇ ದಿನಾಂಕ 25ರಂದು ಚುನಾವಣೆ ನಡೆಯಲಿದ್ದು, ದಾವಣಗೆರೆ ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ಕೋಗುಂಡಿ ಬಕ್ಕೇಶಪ್ಪ ನಾಮಪತ್ರ ಸಲ್ಲಿಸಿದ್ದಾರೆ.

ಸಿ ವಿಭಾಗ ಹೊಂದಿರುವ ಸಹಕಾರಿ ಬ್ಯಾಂಕುಗಳು ಮತ್ತು ಕ್ರೆಡಿಟ್ ಸೊಸೈಟಿಗಳಿಂದ ಬಕ್ಕೇಶಪ್ಪ ಉಮೇದುವಾರಿಕೆ ಅರ್ಜಿ ನೀಡಿದ್ದಾರೆ.

ಶಿವ ಸಹಕಾರಿ ಬ್ಯಾಂಕ್ ಉಪಾಧ್ಯಕ್ಷ ಐಗೂರು ಸಿ. ಚಂದ್ರಶೇಖರ್, ಸಿಟಿ ಕೋ-ಆಪರೇಟಿವ್ ಬ್ಯಾಂಕ್ ಹಿರಿಯ ನಿರ್ದೇಶಕ ಗುರುಸಿದ್ದಯ್ಯ, ಕನ್ಯಕಾಪರಮೇಶ್ವರಿ ಕೋ-ಆಪರೇಟಿವ್‌ ಬ್ಯಾಂಕ್ ಅಧ್ಯಕ್ಷ ಆರ್.ಜಿ. ಶ್ರೀನಿವಾಸ ಮೂರ್ತಿ, ಶ್ರೀಶೈಲ ಕ್ರೆಡಿಟ್ ಸೊಸೈಟಿ ನಿರ್ದೇಶಕ ಮೇಕಾ ಮುರುಳೀಕೃಷ್ಣ, ಬೇತೂರು ಕರಿಬಸಪ್ಪ, ಪರಶುರಾಮ್ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

error: Content is protected !!