ಪರ್ಲ್ ಪಬ್ಲಿಕ್ ಶಾಲೆ ವಿದ್ಯಾರ್ಥಿನಿ ಅನ್ವಿತ ಅಕಲ್‍ಗೋಳ್ ರಾಜ್ಯ ಮಟ್ಟಕ್ಕೆ ಆಯ್ಕೆ

ಪರ್ಲ್ ಪಬ್ಲಿಕ್ ಶಾಲೆ ವಿದ್ಯಾರ್ಥಿನಿ ಅನ್ವಿತ ಅಕಲ್‍ಗೋಳ್ ರಾಜ್ಯ ಮಟ್ಟಕ್ಕೆ ಆಯ್ಕೆ

ಹರಪನಹಳ್ಳಿ, ಜ.19- ಪಟ್ಟಣದ ಹೊರ ವಲಯದಲ್ಲಿರುವ ಪ್ರಕೃತಿ ವಿದ್ಯಾಸಂಸ್ಥೆಯ ಪರ್ಲ್ ಪಬ್ಲಿಕ್ ಶಾಲೆಯ ವಿದ್ಯಾರ್ಥಿನಿ ಅನ್ವಿತ ಅಕಲ್‍ಗೋಳ್ ಅವರು, ವಿವೇಕ ವಿದ್ಯಾರ್ಥಿ ಎಂಬ ವ್ಯಕ್ತಿತ್ವ ನಿರ್ಮಾಣಕಾರಿ ಲಿಖಿತ ಪರೀಕ್ಷೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ತುಮಕೂರಿನ ಕರ್ನಾಟಕ ರಾಮಕೃಷ್ಣ ವಿವೇಕಾನಂದ ಭಾವ ಪ್ರಚಾರ ಪರಿಷತ್ ಎಂಬ ಸಂಸ್ಥೆ ಅಡಿಯಲ್ಲಿ ನವೆಂಬರ್ ತಿಂಗಳಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿ ಗಾಗಿ ರಾಜ್ಯಮಟ್ಟದ ವಿವೇಕ ವಿದ್ಯಾರ್ಥಿ ಎಂಬ ವ್ಯಕ್ತಿತ್ವ ನಿರ್ಮಾಣ ಲಿಖಿತ ಪರೀಕ್ಷೆ ಏರ್ಪಡಿಸಲಾಗಿತ್ತು.  ಈ ಪರೀಕ್ಷೆಯಲ್ಲಿ ಪರ್ಲ್ ಪಬ್ಲಿಕ್ ಶಾಲೆಯ 8ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿ ರುವ ಅನ್ವಿತ ಅಕಲ್‍ಗೋಳ್ ವಿವೇಕ ವಿದ್ಯಾರ್ಥಿ ಲಿಖಿತ ಪರೀಕ್ಷೆ ಯನ್ನು ತೆಗೆದುಕೊಂಡು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ತುಮಕೂರಿನ ರಾಮಕೃಷ್ಣ ವಿವೇಕಾನಂದ ಆಶ್ರಮದಲ್ಲಿ ಜ. 20ರ ಶನಿವಾರ ಬೆಳಿಗ್ಗೆ 10 ಗಂಟೆಗೆ ಸ್ವಾಮಿ ವಿವೇಕಾನಂದ ಜನ್ಮ ದಿನಾಚರಣೆ ಮತ್ತು ವಿವೇಕ ವಿದ್ಯಾರ್ಥಿ ಪರೀಕ್ಷೆಯ ಬಹುಮಾನ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಲು ವಿದ್ಯಾರ್ಥಿನಿ ಅನ್ವಿತ ಅಕಲ್‍ಗೋಳ್‍ಗೆ ತುಮಕೂರಿನ ರಾಮಕೃಷ್ಣ ವಿವೇಕಾನಂದ ಆಶ್ರಮದಿಂದ ಆಹ್ವಾನ ಕಳುಹಿಸಲಾಗಿದೆ.

error: Content is protected !!