ನಗರದಲ್ಲಿ ಇಂದು ಕಾಂಗ್ರೆಸ್‍ನಿಂದ ಬಿಜೆಪಿ ವಿರುದ್ಧ ಪ್ರತಿಭಟನೆ

ರಾಹುಲ್ ಗಾಂಧಿ ಯವರ ನೇತೃತ್ವದ ಭಾರತ್ ಜೋಡೋ ನ್ಯಾಯ ಯಾತ್ರೆಯು ಅಸ್ಸಾಂನಲ್ಲಿ ಸಾಗುತ್ತಿದ್ದ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರು ರಾಹುಲ್ ಗಾಂಧಿ ಯವರು ಸಾಗುತ್ತಿದ್ದ ಬಸ್ಸನ್ನು ಅಡ್ಡಗಟ್ಟಿ ಅವರ ಮೇಲೆ ದಾಳಿ ನಡೆಸಲು ಯತ್ನಿಸಿರುವುದನ್ನು ಖಂಡಿಸಿ, ಜಿಲ್ಲಾ ಕಾಂಗ್ರೆಸ್‌ನಿಂದ ಇಂದು ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದೆ.

ಇಂದು ಬೆಳಿಗ್ಗೆ 11-30 ಗಂಟೆಗೆ ಜಯದೇವ ವೃತ್ತದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಬಿ.ಮಂಜಪ್ಪನವರ ಅಧ್ಯಕ್ಷತೆಯಲ್ಲಿ ಈ ಪ್ರತಿಭಟನೆ ನಡೆಯಲಿದೆ ಎಂದು ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ.ಶೆಟ್ಟಿ ಕೋರಿದ್ದಾರೆ.

error: Content is protected !!