ಆರೋಗ್ಯವಂತರಿಂದ ಮಾತ್ರ ಉತ್ತಮ ಜೀವನ ರೂಪಿಸಿಕೊಳ್ಳಲು ಸಾಧ್ಯ: ಪ್ರಭಾ

ಆರೋಗ್ಯವಂತರಿಂದ ಮಾತ್ರ ಉತ್ತಮ ಜೀವನ ರೂಪಿಸಿಕೊಳ್ಳಲು ಸಾಧ್ಯ: ಪ್ರಭಾ

ದಾವಣಗೆರೆ, ಜ. 23- ಉತ್ತಮ ಜೀವನ ರೂಪಿಸಿಕೊಳ್ಳಲು ಆರೋಗ್ಯವಂತರಿಂದ ಮಾತ್ರ ಸಾಧ್ಯ ಎಂದು ಎಸ್.ಎಸ್.ಕೇರ್ ಟ್ರಸ್ಟ್‍ನ ಲೈಫ್ ಟ್ರಸ್ಟಿ ಡಾ. ಪ್ರಭಾ ಮಲ್ಲಿಕಾರ್ಜುನ್ ತಿಳಿಸಿದರು.

ಅವರಿಂದು ದಾವಣಗೆರೆ ಮಹಾನಗರ ಪಾಲಿಕೆ ವ್ಯಾಪ್ತಿಯ 17ನೇ ವಾರ್ಡ್ ಪಿ.ಜೆ. ಬಡಾವಣೆಯ ವನಿತಾ ಸಮಾಜದಲ್ಲಿ ಎಸ್.ಎಸ್.ಕೇರ್ ಟ್ರಸ್ಟ್ ವತಿಯಿಂದ ಬಾಪೂಜಿ ಆಸ್ಪತ್ರೆಯ ವೈದ್ಯರ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಅನೇಕರು ದುಶ್ಚಟಗಳಿಗೆ ಬಲಿಯಾಗಿ ತಮ್ಮ ಜೀವನವನ್ನು ಹಾಳು ಮಾಡಿಕೊಳ್ಳುತ್ತಿದ್ದು, ಇದರಿಂದ ಕುಟುಂಬಗಳಿಗೆ ತೊಂದರೆ ಆಗಲಿದೆ ಎಂದು ಉದಾಹರಣೆ ಸಮೇತ ವಿವರಿಸಿದ ಅವರು ಮಹಿಳೆಯರಿಗೆ ಆರೋಗ್ಯದ ಬಗ್ಗೆ ಕಾಳಜಿ ವಹಿಸಲು ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಮಾಜಿ ಸದಸ್ಯ ದಿನೇಶ್ ಕೆ. ಶೆಟ್ಟಿ, ಶ್ರೀಮತಿ ಲತಿಕಾ ದಿನೇಶ್ ಕೆ. ಶೆಟ್ಟಿ, ವಾರ್ಡ್ ಗೌರವಾಧ್ಯಕ್ಷರಾದ ಪಂಚಪ್ಪ ತೆರದಾಳ್, ಅಧ್ಯಕ್ಷರಾದ ಮಧು ಪವಾರ್, ವೆಂಕಟೇಶ್, ಶ್ರೀಕಾಂತ್ ಬಂಗೇರ, ಯುವರಾಜ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

error: Content is protected !!