10 ಕೋಟಿ ಜನರನ್ನು ತಲುಪಿರುವ ವಿಕಸಿತ ಭಾರತ ಸಂಕಲ್ಪ ಯಾತ್ರೆ : ಸಂಸದ ಸಿದ್ದೇಶ್ವರ

10 ಕೋಟಿ ಜನರನ್ನು ತಲುಪಿರುವ ವಿಕಸಿತ ಭಾರತ ಸಂಕಲ್ಪ ಯಾತ್ರೆ : ಸಂಸದ ಸಿದ್ದೇಶ್ವರ

ದಾವಣಗೆರೆ, ಜ. 23-  ವಿಕಸಿತ ಭಾರತ ಸಂಕಲ್ಪ ಯಾತ್ರೆ ಪ್ರಾರಂಭವಾದ 57 ದಿನಗಳಲ್ಲಿ ಈ ದೇಶದ  ಸುಮಾರು 10 ಕೋಟಿ ಜನರನ್ನು   ತಲುಪಿದೆ ಎಂದು   ಸಂಸದ ಜಿ.ಎಂ.ಸಿದ್ದೇಶ್ವರ ಹೇಳಿದರು.

ನಗರದ ವಿಜಯಲಕ್ಷ್ಮಿ ರಸ್ತೆಯಲ್ಲಿ ಹಮ್ಮಿಕೊಳ್ಳ ಲಾಗಿದ್ದ ವಿಕಸಿತ ಭಾರತ ಸಂಕಲ್ಪ ಯಾತ್ರೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ  ವಿಕಸಿತ ಭಾರತ ಸಂಕಲ್ಪ ಯಾತ್ರೆ ಸುಮಾರು ಈಗಾಗಲೇ 194 ಗ್ರಾಮ ಪಂಚಾಯತಿಗಳಲ್ಲಿ ಕ್ರಮಿಸಿದೆ, ಪಟ್ಟಣ ಪ್ರದೇಶಗಳಲ್ಲಿ ಸುಮಾರು 10 ಸ್ಥಳಗಳಲ್ಲಿ ಕಾರ್ಯಕ್ರಮ ನೀಡಲಾಗಿದೆ ಎಂದು ಮಾಹಿತಿ ನೀಡಿದರು.  ಇದೇ ಸಂದರ್ಭದಲ್ಲಿ ಉಜ್ವಲ ಯೋಜನೆಯಡಿ ಹಲವಾರು ಫಲಾನುಭವಿಗಳಿಗೆ ಉಚಿತ ಗ್ಯಾಸ್ ಸಂಪರ್ಕಗಳನ್ನು ವಿತರಣೆ ಮಾಡಿದರು.

ಕಾರ್ಯಕ್ರಮದಲ್ಲಿ ಮುಖಂಡರಾದ ಜಿಲ್ಲಾ ಬಿಜೆಪಿ  ಮಾಜಿ ಅಧ್ಯಕ್ಷ ಯಶವಂತ ರಾವ್ ಜಾಧವ್, ಜಿಲ್ಲಾ ಬಿ.ಜೆ.ಪಿ. ಅಧ್ಯಕ್ಷ  ವೀರೇಶ್ ಹನಗವಾಡಿ,   ಪಾಲಿಕೆ ಸದಸ್ಯರಾದ ಆರ್.ಎಲ್. ಶಿವಪ್ರಕಾಶ್, ಸೋಗಿ ಶಾಂತಕುಮಾರ್, ಮುಖಂಡರಾದ ಬಿ.ಎಸ್.ಜಗದೀಶ್, ವೈ.ಮಲ್ಲೇಶ್, ಕಿಶೋರ್ ಕುಮಾರ್,   ಲೀಡ್ ಬ್ಯಾಂಕ್ ಮ್ಯಾನೇಜರ್ ಪ್ರಕಾಶ್, ರಾಜು ನೀಲಗುಂದ ಸೇರಿದಂತೆ ಇತರರು ಉಪಸ್ಥಿತರಿದ್ದರು.

error: Content is protected !!