ದಾವಣಗೆರೆ, ಜ. 24 – ನಗರದ ಬಿ.ಎಸ್. ಚನ್ನಬಸಪ್ಪ ಪ್ರಥಮ ದರ್ಜೆ ಕಾಲೇಜಿನ ಎನ್.ಎಸ್.ಎಸ್. ಘಟಕದ ಸ್ವಯಂ ಸೇವಕ ದ್ವಿತೀಯ ಬಿಸಿಎ ಅಭಿಷೇಕ್ ಹೆಚ್.ಎಂ ಅವರು ನಾಡಿದ್ದು ದಿನಾಂಕ 26 ರಂದು ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಪಥ ಸಂಚಲನಕ್ಕೆ ದಾವಣಗೆರೆ ವಿಶ್ವ ವಿದ್ಯಾನಿಲಯದಿಂದ ಆಯ್ಕೆಯಾಗಿದ್ದಾರೆ. ಅಭಿಷೇಕ್ ಹೆಚ್. ಎಂ. ಅವರನ್ನು ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಬಿ.ಸಿ. ಶಿವಕುಮಾರ್, ಪ್ರಾಂಶುಪಾಲ ಪ್ರೊ. ಗುರು ಎಂ.ಸಿ, ಬೋಧಕ, ಬೋಧಕೇತರ ವರ್ಗದವರು ಅಭಿನಂದಿಸಿದ್ದಾರೆ.
ಗಣರಾಜ್ಯೋತ್ಸವ ಪಥ ಸಂಚಲನಕ್ಕೆ ಆಯ್ಕೆ
![24 abhishekh 25.01.2024 ಗಣರಾಜ್ಯೋತ್ಸವ ಪಥ ಸಂಚಲನಕ್ಕೆ ಆಯ್ಕೆ](https://janathavani.com/wp-content/uploads/2024/01/24-abhishekh-25.01.2024.jpg)