ಮಹಾನಗರ ಪಾಲಿಕೆಯ 30ನೇ ವಾರ್ಡ್ ವ್ಯಾಪ್ತಿಯ ಆವರಗೆರೆ ಯಲ್ಲಿರುವ ಶ್ರೀ ಬನಶಂಕರಿ ದೇವಿ ದೇವಸ್ಥಾನದಲ್ಲಿ ಬನದ ಹುಣ್ಣಿಮೆ ಪ್ರಯುಕ್ತ ಇಂದು ಜಾತ್ರಾ ಮಹೋತ್ಸವವನ್ನು ಹಮ್ಮಿಕೊಳ್ಳಲಾಗಿದೆ.
ಶ್ರೀ ಬನಶಂಕರಿ ದೇವಸ್ಥಾನ ಟ್ರಸ್ಟ್ ವತಿಯಿಂದ ಜಾತ್ರೆಯ ಅಂಗವಾಗಿ ಇಂದು ಬೆಳಿಗ್ಗೆ 7.30ಕ್ಕೆ ಗಂಗಾ ಪೂಜೆ, ಶಾಖಾಂಬರಿ ವ್ರತ, ಪಂಚಾಮೃತ ಅಭಿಷೇಕ, ದೇವಿಗೆ ವಿಶೇಷ ಮಹಾ ಮಂಗಳಾರತಿ ಹಾಗೂ ವಿಶೇಷ ಅಲಂಕಾರ ಮಾಡಲಾಗುತ್ತದೆ. 30ನೇ ವಾರ್ಡಿನ ಪ್ರಮುಖ ಬೀದಿಗಳಲ್ಲಿ ದೇವಿ ಮೆರವಣಿಗೆ ಏರ್ಪಡಿಸಲಾಗಿದೆ ಎಂದು ದೇವಸ್ಥಾನ ಸಮಿತಿ ಅಧ್ಯಕ್ಷರು ಹಾಗೂ ಹಿರಿಯ ನ್ಯಾಯವಾದಿ ಎಸ್.ಪರಮೇಶ್ ತಿಳಿಸಿದ್ದಾರೆ.