ಮಲೇಬೆನ್ನೂರು, ಜ.28- ದಾವಣಗೆರೆ ನಗರದಲ್ಲಿರುವ ನಂದಿಗುಡಿ ಕೃಪಾಪೋಷಿತ ವೀರಶೈವ ವಿದ್ಯಾವರ್ಧಕ ಸಂಘದ ಅಡಿಯಲ್ಲಿ ಹಾಸ್ಟೆಲ್ ಕಟ್ಟಡ ನಿರ್ಮಾಣಕ್ಕಾಗಿ ಸರ್ಕಾರದಿಂದ ಅನುದಾನ ನೀಡುವಂತೆ ನೊಳಂಬ ಸಮಾಜದ ಮುಖಂಡ ಜಿಗಳಿ ಇಂದೂಧರ್ ಅವರು ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲ್ಲೂಕಿನ ಚಿಕ್ಕಬಾಸೂರು ಗ್ರಾಮದಲ್ಲಿ ಈಚೆಗೆ ನಡೆದ ಶ್ರೀಗುರು ಸಿದ್ದರಾಮೇಶ್ವರರ 851 ನೇ ಜಯಂತಿ ಮಹೋತ್ಸವದ ಸಮಾರೋಪ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ಇದಕ್ಕೆ ಸಿಎಂ ಸಿದ್ದರಾಮಯ್ಯ ಅವರು ಸಕಾರಾ ತ್ಮಕವಾಗಿ ಸ್ಪಂದಿಸಿದ್ದು, ಅನುದಾನ ನೀಡುವ ಭರವಸೆ ನೀಡಿದ್ದಾರೆಂದು ಕಾಂಗ್ರೆಸ್ ಮುಖಂಡ ನಂದಿಗಾವಿ ಶ್ರೀನಿವಾಸ್ ತಿಳಿಸಿದ್ದಾರೆ.