ವೀರಶೈವ ಲಿಂಗಾಯತ ಪಂಚಮಸಾಲಿ ಸಮಾಜದ 33 ಮತ್ತು 34 ನೇ ವಾರ್ಡ್ ಘಟಕಗಳ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಇಂದು ಸಂಜೆ 5 ಗಂಟೆಗೆ ಕೆಎಸ್ಎಸ್ ಕಾಲೇಜಿನ ಸಭಾಂಗಣದಲ್ಲಿ ನಡೆಯಲಿದೆ.
ಶ್ರೀ ವಚನಾನಂದ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಸಮಾಜದ ಜಿಲ್ಲಾಧ್ಯಕ್ಷ ಬಿ.ಸಿ. ಉಮಾಪತಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ. ಲೋಕೇಶ, ಆಡಳಿತಾಧಿಕಾರಿ ಡಾ. ರಾಜ್ ಕುಮಾರ್ ಆಗಮಿಸಲಿದ್ದು, ನಗರ ಘಟಕದ ಅಧ್ಯಕ್ಷ ಕೈದಾಳ್ ಶಿವಶಂಕರ್ ಅಧ್ಯಕ್ಷತೆ ವಹಿಸಲಿದ್ದಾರೆ.