ಡಿ. ದೇವರಾಜ ಅರಸು ಬಡಾವಣೆಯಲ್ಲಿರುವ ಶ್ರೀ ಮಾತಾ ಅನ್ನಪೂರ್ಣೆಶ್ವರಿ ದೇವಸ್ಥಾನದ 26 ನೇ ವಾರ್ಷಿಕೋತ್ಸವ ಹಾಗೂ ರಥೋತ್ಸವ ಕಾರ್ಯಕ್ರಮವು ನಿನ್ನೆ ಆರಂಭಗೊಂಡಿದ್ದು, ಇದೇ ದಿನಾಂಕ 16 ರವರೆಗೆ ಹಮ್ಮಿಕೊಳ್ಳಲಾಗಿದೆ.
ಇಂದು ಬೆಳಿಗ್ಗೆ 8 ಗಂಟೆಯಿಂದ ಅಭಿಷೇಕ, ಕಳಸ ಸ್ಥಾಪನೆ, ನವಗ್ರಹ ಹೋಮ, ಪೂರ್ಣಾಹುತಿ, ಮಹಾ ಮಂಗಳಾರತಿ, ಮಂತ್ರಪುಷ್ಪ, ಅಷ್ಟಾವಧಾನ ಸೇವೆ, ತೀರ್ಥಪ್ರಸಾದ ವಿನಿಯೋಗವಿದೆ. ಸಂಜೆ 7 ಗಂಟೆಗೆ `ಶಿವ ದಾಕ್ಷಾಯಿಣಿ ನೃತ್ಯ ವೈಭವ’ ರೂಪಕವನ್ನು ತಪಸ್ಯ ವಾಸವಿ ಸಂಸ್ಥೆಯ ಮಕ್ಕಳು ಪ್ರದರ್ಶಿಸಲಿದ್ದಾರೆ.
ನಾಳೆ ಗುರುವಾರ ಬೆಳಿಗ್ಗೆ 8 ಗಂಟೆಗೆ ಪಂಚಾಮೃತ ಅಭಿಷೇಕ, ಮಂಡಲ ಆರಾಧನೆ, ರುದ್ರಹೋಮ, ವಿವಿಧ ಪೂಜಾ ಕಾರ್ಯಕ್ರ ಮಗಳು ಜರುಗಲಿವೆ. ಸಂಜೆ 5 ಕ್ಕೆ ಶ್ರೀ ಗಿರಿಜಾ ಶಂಕರ ಕಲ್ಯಾಣ ಹಮ್ಮಿಕೊಳ್ಳಲಾಗಿದ್ದು, ಬೆಂಗಳೂರಿನ ಪುರೋಹಿತರಾದ ಜಿ. ಪ್ರವೀಣ್ ಅವರಿಂದ ನಡೆಯಲಿದೆ. ಇದಲ್ಲದೇ ಪ್ರತಿ ಶನಿವಾರ ಸಂಜೆ 6.30 ಕ್ಕೆ ದೇವಸ್ಥಾನದಲ್ಲಿ ಹನುಮಾನ್ ಚಾಲಿಸ್ ಪಠಣ ನಡೆಯಲಿದೆ.