ದಾವಣಗೆರೆ, ಫೆ.14- ಜಿಲ್ಲೆಯ ಕೈಗಾರಿಕೆಗಳು, ಉದ್ದಿಮೆ ಘಟಕಗಳು, ಆಸ್ಪತ್ರೆಗಳು, ಕ್ಲಿನಿಕ್ಗಳು, ಸಾಮಿಲ್ಗಳು, ವಾಣಿಜ್ಯ ಉಪ ಯೋಗಿ ಕಾರ್ಯ ನಿರ್ವಹಿಸುತ್ತಿರುವ ಸಂಸ್ಥೆಗಳು, ಸಮುದಾಯ ಭವನ ಗಳು, ಕಲ್ಯಾಣ ಮಂಟಪಗಳು, ಅಪಾರ್ಟ್ ಮೆಂಟ್ಗಳು ನಿಯಮಾನು ಸಾರ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಸ್ಥಾಪನಾ ಸಮ್ಮತಿ ಮತ್ತು ಚಾಲನಾ ಸಮ್ಮತಿ ಪತ್ರ ಪಡೆಯುವುದು ಕಡ್ಡಾಯವಾಗಿರುತ್ತದೆ.
ಈ ಹಿನ್ನೆಲೆಯಲ್ಲಿ ಮಂಡಳಿಯಿಂದ ಸ್ಥಾಪನಾ ಸಮ್ಮತಿ ಪತ್ರ ಮತ್ತು ಚಾಲನಾ ಸಮ್ಮತಿ ಪತ್ರ ಪಡೆದು ನವೀಕರಿಸಿಕೊಳ್ಳದೇ ಇರುವಂತಹ ಹಾಗೂ ಸಮ್ಮತಿ ಪತ್ರ ಪಡೆಯದೇ ಕಾರ್ಯನಿರ್ವಹಿಸುತ್ತಿರುವ ಮಂಡಳಿಯವರು ಸಮ್ಮತಿ ಪತ್ರ ಪಡೆದು ಕಾರ್ಯನಿರ್ವಹಿಸುವಂತೆ ಈ ಮೂಲಕ ಸೂಚಿಸಲಾಗಿದೆ. ತಪ್ಪಿದ್ದಲ್ಲಿ ಮಂಡಳಿ ಕಾನೂನು ರೀತ್ಯಾ ಕ್ರಮಗಳನ್ನು ಕೈಗೊಳ್ಳಲಾಗುವುದು. ಹೆಚ್ಚಿನ ಮಾಹಿತಿಗಾಗಿ ಪ್ರಾದೇಶಿಕ ಕಚೆೀರಿ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯನ್ನು ಸಂಪರ್ಕಿಸಲು ಮಂಡಳಿಯ ಪರಿಸರ ಅಧಿಕಾರಿ ತಿಳಿಸಿದ್ದಾರೆ.