ರೂಢಿಗತ, ನಕಾಶೆ ದಾರಿ ಬಿಡಿಸಲು ಕ್ರಮಕ್ಕೆ ಸೂಚನೆ

ರೂಢಿಗತ, ನಕಾಶೆ ದಾರಿ ಬಿಡಿಸಲು ಕ್ರಮಕ್ಕೆ ಸೂಚನೆ

ಕಂದಾಯ ಅಧಿಕಾರಿಗಳು ಹಾಗೂ ರೈತರೊಂದಿಗೆ ಸಭೆ ನಡೆಸಿದ ಜಿಲ್ಲಾಧಿಕಾರಿ ವೆಂಕಟೇಶ್

ದಾವಣಗೆರೆ, ಫೆ.15- ಕೃಷಿಗೆ ಪೂರಕವಾದ ರೂಢಿಗತ, ನಕಾಶೆ ದಾರಿ ಗಳನ್ನು ಬಿಡಿಸಿಕೊಡುವ ಮೂಲಕ ರೈತರು ತಮ್ಮ ಹುಟ್ಟುವಳಿಗಳನ್ನು ಸಾಗಣೆ ಮಾಡಲು ಅನುಕೂಲ ಕಲ್ಪಿಸುವುದು ಎಲ್ಲಾ ತಹಶೀಲ್ದಾ ರರ ಜವಾಬ್ದಾರಿಯಾಗಿದೆ ಎಂದು ಜಿಲ್ಲಾಧಿಕಾರಿ ಡಾ.ವೆಂಕಟೇಶ್ ಎಂ.ವಿ. ತಿಳಿಸಿದರು.

ಅವರು ಗುರುವಾರ ಜಿಲ್ಲಾಧಿ ಕಾರಿಗಳ ಕಚೇರಿ ಸಭಾಂಗಣದಲ್ಲಿ ಕಂದಾಯ ಅಧಿ ಕಾರಿಗಳು ಹಾಗೂ ರೈತ ಮುಖಂಡರೊಂದಿಗೆ ನಡೆಸಲಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. 

ರೈತಸ್ನೇಹಿಯಾಗಿ ಕೆಲಸ ಮಾಡಲು ಈಗಾಗಲೇ ಸರ್ಕಾರ ಸುತ್ತೋಲೆಯ ಮೂಲಕ ರೂಢಿಗತ, ನಕಾಶೆ ರಸ್ತೆಗಳಿದ್ದಲ್ಲಿ ಅವುಗಳನ್ನು ಯಾರಾದರೂ ಮುಚ್ಚಿದರೆ ಅಂತಹ ದಾರಿಯನ್ನು ಬಿಡಿಸಿಕೊಡುವ ಮೂಲಕ ರೈತರು ತಮ್ಮ ಹೊಲಗಳಿಗೆ ಹೋಗಲು ಅನುಕೂಲ ಕಲ್ಪಿಸಬೇಕು. ರೈತರು ಬೆಳೆದ ಬೆಳೆಗಳನ್ನು ಸಕಾಲ ದಲ್ಲಿ ಕಟಾವು ಮಾಡಿ ಹೊರ ತರದಿ ದ್ದಲ್ಲಿ ಹಾಳಾಗುವ ಸಂಭವವಿರುತ್ತದೆ. ಆದ್ದರಿಂದ ಸರ್ಕಾರದ ಸುತ್ತೋ ಲೆಯ ಮೂಲಕ ನಕಾಶೆಯಲ್ಲಿ ಇಲ್ಲದ ದಾರಿ ರೂಢಿಗತವಾಗಿ ದ್ದಲ್ಲಿ, ಅದನ್ನು ದಾರಿ ಎಂದು ಪರಿಗಣಿಸಿ ಯಾರಾದರೂ ಇದಕ್ಕೆ ಅಡ್ಡಿಪಡಿಸಿದಲ್ಲಿ ಇದನ್ನು ಬಿಡಿಸಿಕೊಡುವ ಜವಾಬ್ದಾರಿ ಕಂದಾಯ ಇಲಾಖೆ ಅಧಿಕಾರಿ ಗಳ ದ್ದಾಗಿರುತ್ತದೆ ಮತ್ತು ನಕಾಶೆ ದಾರಿಯನ್ನು ಯಾರಾದರೂ ಒತ್ತುವರಿ ಮಾಡಿಕೊಂಡಿದ್ದಲ್ಲಿ ಕೂಡಲೇ ಆ ದಾರಿಯನ್ನು ತೆರವು ಮಾಡಿಸುವ ಮೂಲಕ ಜನರು ಓಡಾಡಲು ಅವಕಾಶ ಕಲ್ಪಿಸಬೇಕು ಎಂದರು. 

ರೈತರು ತಮ್ಮ ಜಮೀನುಗಳಿಗೆ ಹೋಗಲು ರೂಢಿಗತ, ನಕಾಶೆ ದಾರಿ ಇಲ್ಲದ ಕಾರಣ ಅನೇಕ ಸಮಸ್ಯೆಗಳನ್ನು ಎದುರಿಸುತ್ತಿ ರುವುದನ್ನು ಮನಗಂಡು ಸುತ್ತೋಲೆಯ ಮೂಲಕ ಪರಿಹರಿಸುವ ಕ್ರಮಗಳ ಬಗ್ಗೆ ವಿವರಿಸಲಾಗಿದೆ. ಯಾವುದೇ ದೂರು ರೈತರಿಂದ ಬಂದಲ್ಲಿ ಕೂಡಲೇ ಕ್ರಮಕ್ಕೆ ಮುಂದಾಗಬೇಕೆಂದು ತಹಶೀಲ್ದಾರ್‍ಗೆ ಸೂಚನೆ ನೀಡಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್, ಉಪವಿಭಾಗಾಧಿಕಾರಿ ದುಗಾಶ್ರೀ, ಹೊನ್ನಾಳಿ ಉಪವಿಭಾಗಾಧಿಕಾರಿ ಹುಲ್ಲುಮನಿ ತಿಮ್ಮಣ್ಣ, ತಹಶೀಲ್ದಾರ್ ಅಶ್ವತ್ಥ್‌, ಎಲ್ಲಾ ತಾಲ್ಲೂಕುಗಳ ಎಡಿಎಲ್‍ಆರ್ ಹಾಗೂ ರೈತ ಮುಖಂಡರಾದ ರವಿಕುಮಾರ್, ಕೊಳೇನಹಳ್ಳಿ ಸತೀಶ್ ಹಾಗೂ ಇನ್ನಿತರೆ ರೈತ ಮುಖಂಡರು ಉಪಸ್ಥಿತರಿದ್ದರು.

error: Content is protected !!