ದಾವಣಗೆರೆ, ಫೆ.20- ವಡ್ಡಿನಹಳ್ಳಿಯಲ್ಲಿ ನಿರ್ಮಿಸಿರುವ ನೂತನ ಸಂಯುಕ್ತ ಪ್ರಾದೇಶಿಕ ಚಿಕಿತ್ಸಾ ಕೇಂದ್ರ ಕಟ್ಟಡದ ಉದ್ಘಾಟನೆ ಫೆ. 21ರಂದು ಮಧ್ಯಾಹ್ನ 1ಗಂಟೆಗೆ ನಡೆಯಲಿದೆ ಎಂದು ಕೇಂದ್ರದ ನೋಡಲ್ ಅಧಿಕಾರಿ ಗಣೇಶ್ ಶೇರೆಗಾರ್ ತಿಳಿಸಿದ್ದಾರೆ.
ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವ ವೀರೇಂದ್ರಕುಮಾರ್ ಹಾಗೂ ರಾಜ್ಯ ಸಚಿವ ಎ.ನಾರಾಯಣ ಸ್ವಾಮಿ ವರ್ಚ್ಯುಯಲ್ ಮೂಲಕ ಕಟ್ಟಡ ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ಸಂಸದ ಡಾ. ಜಿ.ಎಂ.ಸಿದ್ದೇಶ್ವರ, ಶಾಸಕರು, ಜಿಲ್ಲೆಯ ಚುನಾಯಿತ ಪ್ರತಿನಿಧಿಗಳು, ಸಿರ್ಸಿ ಕೇಂದ್ರದ ನಿರ್ದೇಶಕಿ ಮೀನಾಕ್ಷಿ, ಬಿ.ವಿ.ರಾಮ್ ಕುಮಾರ್ ಇತರರು ಭಾಗವಹಿಸಲಿದ್ದಾರೆ ಎಂದರು. ಕೇಂದ್ರ ಪುನರ್ ವಸತಿ ನೋಡಲ್ ಅಧಿಕಾರಿ ಕನಕ ಸಭಾಪತಿ ಉಪಸ್ಥಿತರಿದ್ದರು.