ದಾವಣಗೆರೆ, ಫೆ. 27- ಇಂದು ನಡೆದ ರಾಜ್ಯಸಭಾ ಚುನಾವಣಾ ನಂತರ ಕಾಂಗ್ರೆಸ್ ಅಭ್ಯರ್ಥಿ ನಾಸೀರ್ ಅಹಮದ್ ಬೆಂಬಲಿಗರು ಸಂಭ್ರಮಾಚರಣೆ ಸಂದರ್ಭದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿರುವುದು ಖಂಡನೀಯ ಎಂದು ಬಿಜೆಪಿ ಮುಖಂಡ ಸಿ.ಆರ್. ನಸೀರ್ ಅಹಮ್ಮದ್ ತಿಳಿಸಿದ್ದಾರೆ. ದೇಶದ್ರೋಹದ ಘೋಷಣೆ ಕೂಗಿದವರನ್ನು ಸರ್ಕಾರ ಬಂಧಿಸಬೇಕು, ದೇಶದ ಜನರೆದುರು ಕ್ಷಮೆಯಾಚಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.
July 23, 2024