ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಪ್ರಸನ್ನಕುಮಾರ್‌ ಖಂಡನೆ

ದಾವಣಗೆರೆ, ಫೆ. 27- ರಾಜ್ಯಸಭಾ ಚುನಾವಣಾ ನಂತರ ಕಾಂಗ್ರೆಸ್ ಅಭ್ಯರ್ಥಿ ನಾಸೀರ್ ಅಹಮದ್ ಬೆಂಬಲಿಗರು ಸಂಭ್ರಮಾಚರಣೆ ಸಂದರ್ಭದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿರುವುದು ಅತ್ಯಂತ ಖಂಡನೀಯ ಎಂದು ಪಾಲಿಕೆ ವಿರೋಧ ಪಕ್ಷದ ನಾಯಕ ಕೆ. ಪ್ರಸನ್ನಕುಮಾರ್ ಹೇಳಿದ್ದಾರೆ.

ಘೋಷಣೆ ಕೂಗಿದವರನ್ನು ಈ ಕೂಡಲೇ ದೇಶದ್ರೋಹದ ಕಾನೂನಿನ ಅಡಿಯಲ್ಲಿ ಬಂಧಿಸಬೇಕು. ಅದೇ ರೀತಿ ಈ ದೇಶದ ರಾಜ್ಯಸಭಾ ಸದಸ್ಯರಾಗಿ, ಅವರ ಬೆಂಬಲಿಗರು ಘೋಷಣೆ ಕೂಗಿದಂತಹ ಸಂದರ್ಭದಲ್ಲಿ ಅದನ್ನು ಖಂಡಿಸಬೇಕಿತ್ತು. ಅದರ ಹೊರತಾಗಿ ಇದನ್ನು ಪ್ರಶ್ನಿಸಿದಂತಹ ಮಾಧ್ಯಮದವರ ಮೇಲೆ ದರ್ಪ ತೋರಿದ್ದಾರೆ. ಇದು ದೇಶ ದ್ರೋಹದ ವರ್ತನೆಗೆ ತಮ್ಮ ಬೆಂಬಲವಿದೆ ಎಂದು ತೋರಿದ್ದಾರೆ. ಈ ಕೂಡಲೇ ಕಾಂಗ್ರೆಸ್ ಪಕ್ಷ ಅವರನ್ನು ವಜಾಗೊಳಿಸಬೇಕು ಎಂದು ಪ್ರಸನ್ನಕುಮಾರ್ ಆಗ್ರಹಿಸಿದ್ದಾರೆ. 

error: Content is protected !!