ತಂಬಾಕಿನಿಂದಾಗುವ ದುಷ್ಪರಿಣಾಮಗಳು : ಕುರಿತು ತರಬೇತಿ ಕಾರ್ಯಗಾರ

ತಂಬಾಕಿನಿಂದಾಗುವ ದುಷ್ಪರಿಣಾಮಗಳು : ಕುರಿತು ತರಬೇತಿ ಕಾರ್ಯಗಾರ

ಯುವ ಶಿಕ್ಷಕರು ಸ್ವಾಸ್ಥ್ಯ ಸಮಾಜ ನಿರ್ಮಾಣದಲ್ಲಿ ಕೈಜೋಡಿಸಬೇಕು; ಪ್ರೊ.ಡಿ.ಬಿ.ಕುಂಬಾರ

ದಾವಣಗೆರೆ, ಫೆ. 29 – ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ದಾವಣಗೆರೆ ವಿಶ್ವವಿದ್ಯಾನಿಲಯ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಇವರ ಸಹಯೋಗ ದೊಂದಿಗೆ ಗುರುವಾರ ಎಂ.ಬಿ.ಎ ಸಭಾಂಗಣದಲ್ಲಿ ಎಂ.ಪಿ.ಇಡಿ ಪ್ರಶಿಕ್ಷಣಾರ್ಥಿಗಳಿಗೆ ತಂಬಾಕಿನಿಂದ ಆಗುವ ದುಷ್ಪರಿಣಾಮಗಳು ಹಾಗೂ ಕೋಟ್ಪಾ-2003 ರ ಕಾಯ್ದೆಯ ಕುರಿತು ತರಬೇತಿ ಕಾರ್ಯಾಗಾರವನ್ನು ಏರ್ಪಡಿಸಲಾಗಿತ್ತು. 

ಕಾರ್ಯಾಗಾರವನ್ನು ದಾವಣಗೆರೆ ವಿಶ್ವವಿದ್ಯಾನಿಲಯದ ಕುಲಪತಿ  ಪ್ರೊ. ಬಿ.ಡಿ. ಕುಂಬಾರ  ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ಶಿಕ್ಷಕ ವೃತ್ತಿ ಆರಂಭಿಸುವ ನೀವು ತಂಬಾಕಿನ ದುಷ್ಪರಿಣಾಮಗಳ ಬಗ್ಗೆ ಅರಿತು ಈ ಬಗ್ಗೆ ಸಮುದಾಯಕ್ಕೆ ತಲುಪಿಸುವ ಜವಾಬ್ದಾರಿ ನಿಮ್ಮದಾಗಿರುತ್ತದೆ. ನಿಮ್ಮಿಂದ ಸಾರ್ವಜನಿಕರಲ್ಲಿ ಪ್ರಜ್ಞೆ ಉಂಟಾಗಿ ಸ್ವಾಸ್ಥ್ಯ ಸಮಾಜ ನಿರ್ಮಿಸಬಹುದು. ತಂಬಾಕು ಉತ್ಪನ್ನ ತಯಾರಿಸುವ ಕಂಪನಿಯ ಮಾಲೀಕರು ಆಕಾಶದಲ್ಲಿ ಹಾರಡುತ್ತಿದ್ದು, ತಂಬಾಕು ಉತ್ಪನ್ನಗಳನ್ನು ಬಳಸುತ್ತಿರುವವರು ರೋಗ-ರುಜಿನೆಗಳಿಂದ ಬಳಲಿ ಆರ್ಥಿಕ ತೊಂದರೆಗಳಿಂದ ಆಸ್ಪತ್ರೆಗಳಿಗೆ ಅಲೆದಾಡುತ್ತಿದ್ದಾರೆ. ಆದ್ದರಿಂದ ಪ್ರತಿ ಒಬ್ಬ ನಾಗರಿಕರು ಇಂತಹ ದುಶ್ಚಟಗಳಿಂದ ದೂರವಿದ್ದು ಸ್ವಾಸ್ಥ್ಯ ಸಮಾಜ ನಿರ್ಮಾಣ ಮಾಡುವ ನಿಟ್ಟಿನಲ್ಲಿ ಯುವ ಶಿಕ್ಷಕರ  ಜವಾಬ್ದಾರಿ ಹೆಚ್ಚಿದೆ ಎಂದು ತಿಳಿಸಿದರು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಎಸ್. ಷಣ್ಮುಖಪ್ಪ ಮಾತನಾಡಿ, ಯುವಕರು ಕುತೂಹಲದಿಂದ ದುಶ್ಚಟಗಳಿಗೆ ಬಲಿಯಾಗಿ ಅತೀ ಚಿಕ್ಕ ವಯಸ್ಸಿನಲ್ಲಿಯೇ ಮರಣ ಹೊಂದುತ್ತಿರುವ ವರನ್ನು ರಸ್ತೆ ಬದಿಯಲ್ಲಿ ಅಂಟಿಸುವ ಪೊಸ್ಟರ್‍ಗಳಲ್ಲಿ ನೋಡುತ್ತಿದ್ದೇವೆ. ಹಾಗಾಗಿ ಉತ್ತಮ ಆರೋಗ್ಯಕ್ಕಾಗಿ ದುಶ್ಚಟಗಳಿಂದ ದೂರವಿರಿ, ತಂಬಾಕು ಬಾಯಿ ಮತ್ತು ಶ್ವಾಸಕೋಶದ ಕ್ಯಾನ್ಸರ್‍ಗೆ ಸಿಮೀತವಾಗದೆ, ದೇಹದ ಪ್ರತಿ ಒಂದು ಅಂಗಾಂಗಕ್ಕೂ ಕ್ಯಾನ್ಸರನ್ನು ತರಿಸುತ್ತದೆ. ಆದ್ದರಿಂದ ಪ್ರಾರಂಭಿಕ ಹಂತದಿಂದಲೇ ದುಶ್ಚಟಗಳಿಂದ ದೂರವಿರಬೇಕೆಂದು ತಿಳಿಸಿದರು.

ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಜಿಲ್ಲಾ ಕಾರ್ಯಕ್ರಮಾಧಿಕಾರಿ ಡಾ. ರಾಘವನ್ ಜಿ.ಡಿ, ಆರ್ಥಿಕಾಧಿಕಾರಿ ದ್ಯಾಮನಗೌಡ ಮುದ್ದನಗೌಡ್ರು, ದಾವಣಗೆರೆ ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯ ಡಾ. ದಿವಾಕರ್ ನಾಯ್ಕ, ಕ್ರೀಡಾ ವಿಭಾಗದ ದೈಹಿಕ ಶಿಕ್ಷಣದ ಮುಖ್ಯಸ್ಥ ಡಾ. ಕೆ ವೇಂಕಟೇಶ,  ಸಮಾಜಕಾರ್ಯ ಅಧ್ಯಯನ ವಿಭಾಗದ ಸಹಾಯಕ ಪ್ರಾಧ್ಯಾಪಕ ಪ್ರದೀಪ್ ಬಿ. ಎಸ್, ಕ್ರೀಡಾಧಿಕಾರಿ ಡಾ. ವೀರಪ್ಪ ಬಿ.ಹೆಚ್, ಸಿ.ಜಿ. ಆಸ್ಪತ್ರೆ ದಂತ ವಿಭಾಗದ ಮುಖ್ಯಸ್ಥರು ಸಂಪನ್ಮೂಲ ವ್ಯಕ್ತಿ ಡಾ. ತಿಪ್ಪೇಸ್ವಾಮಿ ಪಿ. ಎಂ, ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರ ಸತೀಶ್ ಕಲಹಾಳ್, ಸಮಾಜ ಕಾರ್ಯಕರ್ತ ದೇವರಾಜ್ ಕೆ.ಪಿ ಹಾಜರಿದ್ದರು.

error: Content is protected !!