ದಾವಣಗೆರೆ, ಮಾ. 4 – ಜಿಲ್ಲಾ ಪೊಲೀಸ್ ಹಾಗೂ ಪ್ರಾದೇಶಿಕ ಸಾರಿಗೆ ಇಲಾಖೆ ಅಧಿಕಾಗರಿಗಳ ಸಹಯೋಗ ದಲ್ಲಿ ನಗರದ ಪೊಲೀಸ್ ಕವಾಯತು ಮೈದಾನದಲ್ಲಿರುವ ಪೊಲೀಸ್ ಭವನ ದಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕ ವಿಜಯಕುಮಾರ್ ಎಂ. ಸಂತೋಷ್ ಅವರ ಅಧ್ಯಕ್ಷತೆಯಲ್ಲಿ ಹಾಗೂ ದಾವಣ ಗೆರೆ ಪ್ರಾದೇಶಿಕ ಸಾರಿಗೆ ಅಧಿಕಾರಿ ಪ್ರಮುತೇಶ್ ಅವರ ಉಪಸ್ಥಿತಿಯಲ್ಲಿ ನಗರದ ಆಟೋ ಚಾಲಕರಿಗೆ ಚಾಲನಾ ಪರವಾನಿಗೆ ಪತ್ರ ಮತ್ತು ವಾಹನ ನೋಂದಣಿ ಪತ್ರ, ವಾಯು ಮಾಲಿನ್ಯ ಪತ್ರ, ಫಿಟ್ನೆಸ್ ಪ್ರಮಾಣ ಪತ್ರ, ಅನುಮತಿ ಪತ್ರ, ವಿಮೆ ಪತ್ರ ಮಾಡಿಸುವ ಬಗ್ಗೆ ಅರಿವು ಮೂಡಿಸುವ ಕಾರ್ಯಾ ಗಾರವನ್ನು ಹಮ್ಮಿಕೊಳ್ಳಲಾಗಿತ್ತು.
ಕಾರ್ಯಾಗಾರದಲ್ಲಿ ನಗರ ಡಿ.ವೈ.ಎಸ್.ಪಿ. ಮಲ್ಲೇಶ್ ದೊಡ್ಮನಿ, ಸಂಚಾರಿ ಪೊಲೀಸ್ ವೃತ್ತ ನಿರೀಕ್ಷಕ ಮಂಜುನಾಥ ನಲವಾಗಲು, ಆರ್.ಟಿ.ಓ ನಿರೀಕ್ಷಕ ಸತೀಶ್ ಕುಮಾರ್, ಆಟೋ ಮಾಲೀಕರು ಮತ್ತು ಚಾಲಕರು ಭಾಗವಹಿಸಿದ್ದರು.