ಕಸಾಪ ವಾರ್ಷಿಕ ಸಾಮಾನ್ಯ ಸಭೆ

ದಾವಣಗೆರೆ, ಮಾ. 5- ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ 107 ನೇ ಹಾಗೂ 2022-23 ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆಯನ್ನು ಇದೇ ದಿನಾಂಕ 10ರ ಭಾನುವಾರ ಬೆಳಿಗ್ಗೆ 11 ಗಂಟೆಗೆ  ಹೊಳಲ್ಕೆರೆ  ತಾಲ್ಲೂಕಿನ ಮಲ್ಲಾಡಿಹಳ್ಳಿಯಲ್ಲಿರುವ ಶ್ರೀ ರಾಘವೇಂದ್ರ ಜ್ಞಾನ ಮಂದಿರದಲ್ಲಿ ಕೇಂದ್ರ ಕಸಾಪ ಅಧ್ಯಕ್ಷ ಡಾ.ಮಹೇಶ ಜೋಶಿ ಅವರ ಅಧ್ಯಕ್ಷತೆಯಲ್ಲಿ ಏರ್ಪಡಿಸಲಾಗಿದೆ.

ಕನ್ನಡ ಸಾಹಿತ್ಯ ಪರಿಷತ್ತಿನ ಆಜೀವ ಸದಸ್ಯರುಗಳು ಕಡ್ಡಾಯವಾಗಿ ತಮ್ಮ ಪರಿಷತ್ತಿನ ಗುರುತಿನ ಚೀಟಿ ಅಥವಾ ಪ್ರಜಾ ಪ್ರಾತಿನಿಧ್ಯ ಕಾಯ್ದೆ ಅನ್ವಯ ಸೂಚಿಸಿರುವ ಯಾವುದಾದರೂ ಒಂದು ಗುರುತಿನ ಚೀಟಿಯೊಂದಿಗೆ ಹಾಜರಾಗಿ ಚರ್ಚೆಯಲ್ಲಿ ಭಾಗವಹಿಸಬೇಕು ಎಂದು ಚನ್ನಗಿರಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಲ್.ಜಿ.ಮಧುಕುಮಾರ್ ಮನವಿ ಮಾಡಿದ್ದಾರೆ.

error: Content is protected !!