ದಾವಣಗೆರೆ, ಮಾ.5- ಎಸ್.ಎಸ್.ಕೇರ್ ಟ್ರಸ್ಟ್ನ ಲೈಫ್ ಟ್ರಸ್ಟಿ ಶ್ರೀಮತಿ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರ ನೇತೃತ್ವದಲ್ಲಿ ಬಿಐಇಟಿ ಕಾಲೇಜ್ ಕ್ಯಾಂಪಸ್ನಲ್ಲಿರುವ ಎಸ್.ಎಸ್. ಮಲ್ಲಿಕಾರ್ಜುನ್ ಸಾಂಸ್ಕೃತಿಕ ಕೇಂದ್ರದಲ್ಲಿ ನಾಳೆ 6ರ ಬುಧವಾರ ಬೆಳಗ್ಗೆ 9.30 ಗಂಟೆಗೆ ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮ ಮತ್ತು ನಾಡಿದ್ದು 7 ರಂದು ಗುರುವಾರ ಸಂಜೆ 5.30 ಗಂಟೆಗೆ ಎಸ್.ಎಸ್.ಟ್ರಸ್ಟ್ನ 5ನೇ ವಾರ್ಷಿಕೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀಮತಿ ಉಮಾ ಪ್ರಶಾಂತ್, ಬಿ.ಇ.ಎ.ಆಡಳಿತ ಮಂಡಳಿ ಸದಸ್ಯರಾದ ಶ್ರೀಮತಿ ಕಿರುವಾಡಿ ಗಿರಿಜಮ್ಮ, ವಿಶೇಷ ಆಹ್ವಾನಿತರಾಗಿ ಡಾ.ಗಿರಿಜಾ ಬಾಬುಗೌಡ ನಾಡಗೌಡರ್ ಆಗಮಿಸಲಿದ್ದಾರೆ.
ಟ್ರಸ್ಟ್ನ ವಾರ್ಷಿಕೋತ್ಸವ ಸಮಾರಂಭವು ಶ್ರೀ ತರಳಬಾಳು ಜಗದ್ಗುರು ಡಾ. ಶ್ರೀ ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮೀಜಿ ದಿವ್ಯ ಸಾನ್ನಿಧ್ಯದಲ್ಲಿ ಜರುಗಲಿದೆ. ಮುಖ್ಯ ಅತಿಥಿಗಳಾಗಿ ನಿವೃತ್ತ ನ್ಯಾಯಮೂರ್ತಿ ಜಸ್ಟಿಸ್ ಶಿವರಾಜ್ ವಿ. ಪಾಟೀಲ್ ಆಗಮಿಸುವರು. ಶಾಸಕ ಶಾಮನೂರು ಶಿವಶಂಕರಪ್ಪ, ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಪಾಲ್ಗೊಳ್ಳುವರು.