ಚಿತ್ರದುರ್ಗ,ಮಾ.6- ಸರ್ವೋಚ್ಛ ನ್ಯಾಯಾಲಯ ಹಾಗು ಕರ್ನಾಟಕ ಸರ್ಕಾರದ ಆದೇಶದನ್ವಯ ನಿವೃತ್ತ ಐ.ಎ.ಎಸ್. ಅಧಿಕಾರಿ ಶಿವಯೋಗಿ ಸಿ. ಕಳಸದ ಅವರು ಇಲ್ಲಿನ ಮುರುಘಾ ಮಠ ಮತ್ತು ಎಸ್.ಜೆ.ಎಂ. ವಿದ್ಯಾಪೀಠದ ಅಧ್ಯಕ್ಷರಾಗಿ ಇಂದು ಅಧಿಕಾರ ವಹಿಸಿಕೊಂಡರು.
ಶ್ರೀ ಮುರುಘಾಮಠದಲ್ಲಿ ಮಠದ ಕಾರ್ಯದರ್ಶಿ ಎ.ಜೆ. ಪರಮಶಿವಯ್ಯ, ಕಳಸದ ಅವರಿಗೆ ಅಧಿಕಾರ ಹಸ್ತಾಂತರಿಸಿದರು. ಶ್ರೀ ಬಸವಪ್ರಭು ಸ್ವಾಮಿಗಳು, ಎಸ್.ಎಂ.ಎಲ್ ತಿಪ್ಪೇಸ್ವಾಮಿ ಹಾಗು ಎಸ್.ಜೆ.ಎಂ. ವಿದ್ಯಾಪೀಠದ ನೌಕರ ವರ್ಗದವರು ಈ ಸಂದರ್ಭದಲ್ಲಿ ಹಾಜರಿದ್ದರು. ನಂತರ ಕಳಸದ ಅವರು ಸಂಸ್ಥೆಯ ಕಾಲೇಜುಗಳಿಗೆ ಭೇಟಿ ನೀಡಿದರು.