ಕಾಲೇಜು ಕ್ಯಾಂಪಸ್‌ನಲ್ಲಿ ಹೊರಗಿನ ವ್ಯಕ್ತಿಗಳು ಬಾರದಂತೆ ಎಚ್ಚರಿಕೆ ವಹಿಸಿ

ಕಾಲೇಜು ಕ್ಯಾಂಪಸ್‌ನಲ್ಲಿ ಹೊರಗಿನ ವ್ಯಕ್ತಿಗಳು ಬಾರದಂತೆ ಎಚ್ಚರಿಕೆ ವಹಿಸಿ

ಕಾಲೇಜು ಕ್ಯಾಂಪಸ್‌ನಲ್ಲಿ ಹೊರಗಿನ ವ್ಯಕ್ತಿಗಳು ಬಾರದಂತೆ ಎಚ್ಚರಿಕೆ ವಹಿಸಿ - Janathavani

ನಗರದಲ್ಲಿನ ಕಾಲೇಜುಗಳ ಪ್ರಾಂಶುಪಾಲರೊಂದಿಗೆ ಸಭೆ ನಡೆಸಿದ ಎಸ್ಪಿ ಉಮಾ ಪ್ರಶಾಂತ್

ದಾವಣಗೆರೆ, ಮಾ.7- ಎಸ್ಪಿ ಉಮಾ ಪ್ರಶಾಂತ್  ಅಧ್ಯಕ್ಷತೆಯಲ್ಲಿ ಶನಿವಾರ  ಜಿಲ್ಲಾ ಪೊಲೀಸ್ ಕಛೇರಿ ಸಭಾಂಗಣದಲ್ಲಿ  ನಗರದ  ಪಿಯು ಮತ್ತು ಪದವಿ ಕಾಲೇಜುಗಳ ಪ್ರಾಂಶುಪಾಲರುಗಳೊಂದಿಗೆ ಸಭೆ ನಡೆಯಿತು.

ಈ ವೇಳೆ ಪ್ರಾಂಶುಪಾಲರ ಅಹವಾಲುಗಳನ್ನು ಆಲಿಸಿದ ಎಸ್ಪಿ,  ಸೂಕ್ತ ಕ್ರಮಗಳನ್ನು ಕೈಗೊಳ್ಳುವುದಾಗಿ ತಿಳಿಸಿದರು. 

ವಿದ್ಯಾರ್ಥಿಗಳ ಉತ್ತಮ ಭವಿಷ್ಯಕ್ಕಾಗಿ ಪಿಯು ಮತ್ತು ಪದವಿ ಕಾಲೇಜುಗಳ ಪ್ರಾಂಶುಪಾಲರುಗಳು ಕಾಲೇಜು ವ್ಯಾಪ್ತಿಯಲ್ಲಿ ಕೈಗೊಳ್ಳಬೇಕಾದ ಕ್ರಮಗಳ  ಬಗ್ಗೆ ತಿಳಿಸಿದರು.

ಪೊಲೀಸ್ ತುರ್ತು ಸೇವೆಗಾಗಿ ತುರ್ತು ಸಹಾಯವಾಣಿ 112 ಇದ್ದು, ಪೊಲೀಸ್ ಇಲಾಖೆಗೆ ಸಂಬಂಧಿಸಿದಂತೆ ಯಾವುದೇ ತುರ್ತು ಸೇವೆಗಾಗಿ 112 ಗೆ ಕರೆ ಮಾಡಲು ತಿಳಿಸಿದರು. ಅಗತ್ಯವಿದ್ದರೆ ನೇರವಾಗಿ ಪೊಲೀಸ್ ಅಧಿಕಾರಿಗಳಿಗೆ ಕರೆ ಮಾಡಲು ತಿಳಿಸಿದರು.

ತುರ್ತು ಸೇವೆಗಾಗಿ `ದಾವಣಗೆರೆ ಸುರಕ್ಷಾ’ ಆಪ್ ಅನ್ನು ಜಾರಿಗೆ ತಂದಿದ್ದು, ನಗರದ ವ್ಯಾಪ್ತಿಯಲ್ಲಿ ಯಾವುದೇ ಆಪತ್ತಿನ ಸಮಯದಲ್ಲಿ ಹಾಗೂ ಇತರೆ ತುರ್ತು ಸೇವೆಗೆ ಬಳಸಬಹುದಾಗಿರುತ್ತದೆ.

ಪ್ರಾಂಶುಪಾಲರುಗಳು ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಮೇಲೆ ನಿಗಾವಹಿಸುವುದು ಹಾಗು ವಿದ್ಯಾರ್ಥಿಗಳ ಪೋಷಕರೊಂದಿಗೆ ಸಭೆ ನಡೆಸಿ ತಮ್ಮ ಮಕ್ಕಳ ನಡೆ ನುಡಿಗಳ ಬಗ್ಗೆ ಅವರುಗಳ ಅಭ್ಯಸಗಳ ಬಗ್ಗೆ ನಿಗಾವಹಿಸುವಂತೆ ಸೂಕ್ತ ತಿಳುವಳಿಕೆ ನೀಡಲು ತಿಳಿಸಿದರು. ಕಾಲೇಜು ಆವರಣದಲ್ಲಿ ಅಥವಾ ಕ್ಯಾಂಪಸ್‌ಗಳಲ್ಲಿ ಅನಾವಶ್ಯಕವಾಗಿ ಹೊರಗಿನ ವ್ಯಕ್ತಿಗಳಿಗೆ ಪ್ರವೇಶಿಸದಂತೆ ಗಮನಹರಿಸಿಬೇಕು, ಈ ಬಗ್ಗೆ ಪ್ರಾಂಶುಪಾಲರುಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು. 

ಸಭೆಯಲ್ಲಿ ವಿವಿಧ ಕಾಲೇಜುಗಳ ಪ್ರಾಂಶು ಪಾಲರುಗಳು ತಮ್ಮ ತಮ್ಮ ಕಾಲೇಜುಗಳಲ್ಲಿನ ಸಮಸ್ಯೆಗಳ ಬಗ್ಗೆ  ಗಮನಕ್ಕೆ ತಂದರು

ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕ ರಾದ ವಿಜಯಕುಮಾರ ಎಂ ಸಂತೋಷ , ನಗರ ಡಿವೈಎಸ್ಪಿ ರವರಾದ ಶ್ರೀ ಮಲ್ಲೇಶ್ ದೊಡ್ಮನಿ ರವರು ಸೇರಿದಂತೆ ಪೊಲೀಸ್ ಅಧಿಕಾರಿಗಳು ಹಾಗೂ ನಗರದ ಎಲ್ಲಾ ಪಿಯು ಮತ್ತು  ಪದವಿ ಕಾಲೇಜುಗಳ ಪ್ರಾಂಶುಪಾಲರುಗಳು ಉಪಸ್ಥಿತರಿದ್ದರು.

error: Content is protected !!