ನಗರದಲ್ಲಿ ಇಂದು ಕದಳಿ ಕಮ್ಮಟ

ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್, ಕದಳಿ ಮಹಿಳಾ ವೇದಿಕೆ,  ಹಾಗೂ ಕನ್ನಡ ಸಾಹಿತ್ಯ ಪರಿಷತ್ತು ಇವರ ಸಹಯೋಗದಲ್ಲಿ ಇಂದು ಬೆಳಿಗ್ಗೆ 10.30ಕ್ಕೆ 151ನೇ ಕದಳಿ ಕಮ್ಮಟ ಮತ್ತು ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಹಮ್ಮಿಕೊಳ್ಳಲಾಗಿದೆ.

ಕುವೆಂಪು ಕನ್ನಡ ಭವನದಲ್ಲಿ ನಡೆಯವ ಕಾರ್ಯಕ್ರಮದಲ್ಲಿ ಕದಳಿ ಮಹಿಳಾ ವೇದಿಕೆ ಜಿಲ್ಲಾ ಘಕದ ಅಧ್ಯಕ್ಷರಾದ ಗಾಯತ್ರಿ ವಸ್ತ್ರದ್ ಅಧ್ಯಕ್ಷತೆ ವಹಿಸಲಿದ್ದಾರೆ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಬಿ. ವಾಮದೇವಪ್ಪ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿರುವರು. 

ಮಹಿಳೆಯರಿಗಾಗಿ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿದ್ದು, ಸ್ಪರ್ಧಾ  ತೀರ್ಪುಗಾರರಾಗಿ ಹೋಮಿಯೋಪತಿ ವೈದ್ಯರಾದ ಡಾ. ಆರತಿ ಸುಂದರೇಶ್ ಉಪಸ್ಥಿತರಿರುವರು. ಕಾರ್ಯಕ್ರಮದಲ್ಲಿ ಕೆ.ಬಿ. ಪರಮೇಶ್ವರಪ್ಪ, ಮಮತಾ ನಾಗರಾಜ್, ಪ್ರಮೀಳಾ ನಟರಾಜ್, ಯಶಾ ದಿನೇಶ್, ವಿನೋಜ ಅಜಗಣ್ಣನವರು ಉಪಸ್ಥಿತರಿರುವರು ಎಂದು ಕಾರ್ಯದರ್ಶಿ ಚಂದ್ರಿಕಾ ಮಂಜುನಾಥ್ ತಿಳಿಸಿದರು.

error: Content is protected !!