ಭದ್ರಕೋಟೆಗಳು ಬದಲಾಗುತ್ತವೆ

ಭದ್ರಕೋಟೆಗಳು ಬದಲಾಗುತ್ತವೆ

ಸಂವಾದ ಕಾರ್ಯಕ್ರಮದಲ್ಲಿ ನಟ ಶಿವರಾಜ್ ಕುಮಾರ್

ದಾವಣಗೆರೆ, ಮಾ. 11 – ಶಿವಮೊಗ್ಗ ಲೋಕಸಭಾ ಕ್ಷೇತ್ರ ಬಿಜೆಪಿ ಭದ್ರಕೋಟೆ ಎಂದು ಹೇ ಳುತ್ತಿದ್ದಾರೆ. ಆದರೆ ಈಗ ಅದೆಲ್ಲ ಇಲ್ಲ. ಯಾವ ಭದ್ರಕೋಟೆಗಳಾ ದರೂ ಕೂಡ ಬದಲಾಗುತ್ತವೆ. ಈ ಬಾರಿ ಅಭಿಮಾನಿಗಳು, ದೇವರ ಆಶೀರ್ವಾದ ನಮ್ಮ ಮೇಲಿರಲಿ ಎಂದು ಹ್ಯಾಟ್ರಿಕ್ ಹೀರೋ, ನಟ ಶಿವರಾಜ್ ಕುಮಾರ್ ಹೇಳಿದರು.

ನಗರದ ತ್ರಿನೇತ್ರ ಚಿತ್ರಮಂದಿ ರದಲ್ಲಿ ಕರಟಕ ದಮನಕ ಚಿತ್ರದ ವಿಜಯ ಯಾತ್ರೆ ಮುಗಿಸಿದ ಬಳಿಕ ಪತ್ರಕರ್ತರೊಂದಿಗೆ ಸಂವಾದ ನಡೆಸಿದ ಅವರು, ಶಿವಮೊಗ್ಗದ ಬಗ್ಗೆ ಗೀತಾ ಶಿವರಾಜ್ ಕುಮಾರ್ ಗೆ ಏನೂ ಗೊತ್ತಿಲ್ಲ ಅನ್ನೋ ಆರೋಪ ಸರಿಯಲ್ಲ ಎಂದು ಹೇಳಿದರು.

ಗೀತಾ ಶಿವರಾಜ್ ಕುಮಾರ್ ಶಿವಮೊಗ್ಗದಲ್ಲೇ ಹುಟ್ಟಿರುವುದು. ಯಾವಾಗಲೂ ಶಿವಮೊಗ್ಗಕ್ಕೆ ಹೋಗಿ ಬರುತ್ತಿದ್ದಾರೆ. ಅವರ ಅಪ್ಪ ಎಸ್. ಬಂಗಾರಪ್ಪ ಅವರು ಸಿಎಂ ಆಗಿ ದ್ದವರು. ಅವರಿಗೆ ಅಲ್ಲಿನ ಸಮಸ್ಯೆ ಬಗ್ಗೆ ಗೊತ್ತಿದೆ. ಅವರ ಸಹೋದರ ಮಧು ಬಂಗಾರಪ್ಪ ಕೂಡ ರಾಜಕೀ ಯದಲ್ಲಿ ಇದ್ದಾರೆ. 

ಗೀತಾ ಶಿವರಾಜ್ ಕುಮಾರ್ ವಿರುದ್ಧ ಕೆಲ ಪ್ರಶ್ನೆಗಳನ್ನು ಸಾಮಾ ಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿರುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಶಿವರಾಜ್ ಕುಮಾರ್, ಗೀತಾ ಶಿವರಾಜ್ ಕುಮಾರ್ ಗೆ ಶಿವಮೊಗ್ಗದ ಸಮಸ್ಯೆ ಬಗ್ಗೆ ಗೊತ್ತಿದೆ.

ಅವರ ಕುಟುಂಬವೂ ರಾಜಕಾರ ಣಿ ಗಳ ಕುಟುಂಬ. ನಮ್ಮ ಕುಟುಂಬ ಸಹ ರಾಜಕಾರಣ ಹೊರತಾಗಿ ಇಲ್ಲ. ನಮ್ಮ ತಂದೆಯವರು ಇದ್ದಾಗ ರಾಜಕಾರಣಿಗಳೇ ಮನೆಗೆ ಬರುತ್ತಿದ್ದರು. ಗೀತಾ ಶಿವರಾಜ್ ಕುಮಾರ್ ರ ಚುನಾವಣೆ ಸಿದ್ಧತೆ ಕೂಡ ನಡೆಯುತ್ತಿದೆ ಎಂದರು.

error: Content is protected !!